ಅವಸರ ಬೇಡ

ಬವಣೆಯ ಬದುಕು
ಭರವಸೆಯಲಿ ಸವೆಸುತ್ತಾ
ದುಡಿಮೆಯಲಿ ಕಾಲ ಕಳೆಯುತ್ತಾ
ತಿನ್ನುವ ಅನ್ನವ ತೊರೆದು
ಹೊರಟೆಯೇನಣ್ಣ ಆತ್ಮಹತ್ಯೆಗೆ
ಆತುರಬೇಡ… ಅವಸರಬೇಡ
ನಿನ್ನ ಒಡಲ ಕುಡಿಗಳಿಹರು
ಆತಂಕಬೇಡ ನಾವಿರುವೆವು ನಿಮಗಾಗಿ

ಹಸಿವೆ.. ಹರಿ ಹಾಯ್ದರೂ…
ನಾವೆಲ್ಲಾ… ಒಂದೊತ್ತಿನ
ಉಣ್ಣುವ ಊಟವು ಬಿಟ್ಟು
ಮೇಘನ ಮೇಲೆ ಆಣೆಯಿಟ್ಟು
ಬೇಡೋಣ ಭೂತಾಯಿ ಒಲವಿಗೆ
ಆತಂಕಬೇಡ ನಾವಿರುವೆವು ನಿಮಗಾಗಿ

ಹೋಗಿಯೇ… ಬಿಡಲಿ
ಅನುಕಂಪವಿರದೆ ಈ ದೇಹದ
ಆ ಒಂದು ಕ್ಷಣ ಉಸಿರು…
ಆಗಲಿ ಆವಾಗಲಾದರೂ
ಭೂಮಡಿಲ ಒಡಲು ಹಸಿರು
ಆತಂಕಬೇಡ ನಾವಿರುವೆವು ನಿಮಗಾಗಿ

ಬದುಕು ಬರಿ ಬರವಲ್ಲ
ಸುಡು ಬಿಸಿಲಿನಿ ಸಿಡೆಲೆಯಾದರೂ
ಬಿಡಲು-ಕೈಬಿಡಳು ಭೂಮಾತೆ
ತನ್ನ-ಕುಡಿಗಳಾಗಿರುವ…
ನಮ್ಮೆಲ್ಲರನ್ನೂ…. ಪೊರೆದವಳು
ಆತಂಕಬೇಡ… ನಾವಿರುವೆವು ನಿಮಗಾಗಿ

ಬೆಂಕಿ ಉಂಡೆಯ ಝಳದಲ್ಲೂ
ತಂಪನೆಯ ತಂಗಾಳಿ ಕಾಣುತ
ಮೈಕೊರೆವ ಮಾಗಿ ಚಳಿಯಲ್ಲೂ
ಬೆಚ್ಚಗಿನ ಬದುಕು ಅರಸಿದವರು
ಆತಂಕಬೇಡ… ನಾವಿರುವೆವು ನಿಮಗಾಗಿ

ಬಿಸಿಲು-ಗಾಳಿ-ಮಳೆಯೆನ್ನದೆ
ಮೈ-ಕೈ ಒಡ್ಡಿ ಮುದಡದ
ಬೆಳೆದು… ಬಾಳಿದವು…
ನನ್ನೂರಿನ ಹೆಮ್ಮೆಯ ಸಿರಿಯುಳ್ಳ
ನಾಡಿನ ಸಾರ್ವಭೌಮರು ನೀವು
ಆತಂಕಬೇಡ… ನಾವಿರುವೆವು ನಿಮಗಾಗಿ

ಬಿಡುವದಿಲ್ಲ… ನಾವು…
ಶರಣಾಗಲು ಸಾವಿಗೇ ನೀವು
ಬರದ ಬೇಗೆಯ ಹಲವು
ವೃಷ್ಟಿ-ಅನಾವೃಷ್ಟಿಗಳೇ ಮುತ್ತಲಿ
ಆತಂಕಬೇಡ ನಾವಿರುವೆವು ನಿಮಗಾಗಿ

ಬೆಂಕಿ ಉಗುಳುತ ಚೆಲ್ಲಲಿ
ಧರೆಯೆ ದಹಿಸುತಲಿ…
ಎದೆಗುಂದಿ… ತಲೆಬಾಗದೆ
ಧೈರ್ಯ ಒಂದೆ ಸರ್ವಸಾಧನೆ
ಮೇರು ಸವಾಲು ಸ್ವೀಕಾರವಿರಲಿ
ಆತಂಕಬೇಡ ನಾವಿರುವೆವು ನಿಮಗಾಗ….

ಬದುಕು-ಗೆಲ್ಲುತಲಿ
ಜಗವೆಲ್ಲಾ ಗೆಲ್ಲಿರಿ…
ಆತ್ಮಹತ್ಯೆಯ ಆಲಿಂಗನದಿ
ಬಡತನದ ಭೂತಕ್ಕೆ ಬೆದರಿ
ಮರೀಚಿಕೆ ಸವಾರಿಬೇಡ
ಆತಂಕಬೇಡ… ನಾವಿರುವೆವು
ನಿಮಗಾಗಿ ಸದಾ… ನಿಮಗಾಗಿ

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅನುರಾಗ
Next post ಸಾವಿರಪದ ಸರದಾರ

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

cheap jordans|wholesale air max|wholesale jordans|wholesale jewelry|wholesale jerseys