ಸಾವಿರಪದ ಸರದಾರ

ಸಾವಿರ ಪದ ಸರದಾರ
ಸಾವು ಮುತ್ತಿತೇ ಧೀರಾ
ಮೂಢ ಸಾವು.. ನಿನ್ನ
ಅರಿಯದೆ.. ಅಟ್ಟಹಾಸದಿ
ಒಯ್ಯುತಿಹನೆಂಬ ಭ್ರಮೆಯಲಿ
ಒಪ್ಪಿಸುತಿಹದು ಅಹವಾಲ ಯಮನಿಗೆ

ಇನ್ನ… ನಗುವಿನ ಚೆಲುವು
ಇಂಪಾದ ಕೋಗಿಲೆ ಧ್ವನಿಯು
ಜೀವ ತುಂಬಿ ಜನ್ಮ ನೀಡುತಿಹವು
ಸಾವಿರ ಪದಗಳ ಸಾಲಾಗುತ
ಅಮರನಾದ… ನೀ ಸರದಾರ

ಅನುದಿನ.. ನೀ ಹಾಡಿದಿ
ಜನಪದ ಸಿರಿ ಬೆಳೆಸಿದಿ
ಅತೃಪ್ತ ಮನದಿ… ಸದಾ ನೀ
ಸಂತೃಪ್ತಿಗಾಗಿ ಅಂತರಾತ್ಮದಿ ಸವೆದಿ
ಅಮಾನವೀಯತೆ ಹಳಿಯುತಲಿ
ಜನಪದರ ಜನಮನ ಸೆಳೆದಿ

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅವಸರ ಬೇಡ
Next post ಒಂಟಿ ಬ್ಯಾರಿಯೂ ಅವಭೃತ ಉತ್ಸವವೂ

ಸಣ್ಣ ಕತೆ

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

cheap jordans|wholesale air max|wholesale jordans|wholesale jewelry|wholesale jerseys