ಶಿವರಾತ್ರಿ ಜಾಗರಣೆ

ಏನು ಹೇಳಲಿ ನಮ್ಮ ಶಿವರಾತ್ರಿ ಜಾಗರಣೆಯ
ಪಿಶಾಚಿಗಳಂತೆ ರಾತ್ರಿ ಎಲ್ಲವ ಕಳೆದು,
ಬೀದಿ ಬೀದಿಯ ಸುತ್ತಿ
ಬೊಗಳುತಿಹ ನಾಯಿಗಳ ಮುಂದೆ,
ನಗರ ಕಾಯುತಿಹ ಪೊಲೀಸರ ಹಿಂದೆ,
ಅಲೆದಲೆದು
ಶಿವನ ಗುಡಿಯ ಮುಂದೆ,
ದಾಸರ ಶಿವಕಥೆಯ ಚಪ್ಪರದಲ್ಲಿ
ಕ್ಷಣ ಹೊತ್ತು ನಿಂತು,
ನಡುರಾತ್ರಿಯಲ್ಲಿ
ಯಾವುದೋ ದರಿದ್ರ ಚಿತ್ರವ ನೋಡಿ,
ಕಂಡ ಹೋಟೆಲಿಗೆ ನುಗ್ಗಿ
ಕೇಳಿದ ಹಣವ ತೆತ್ತು
ತಣ್ಣನೆಯ ಕಹಿ ಕಾಫಿಯ ಕುಡಿದು
ಕಂಡ ಕಂಡ ಬೀದಿಗಳಲ್ಲಿ
ಗೊತ್ತುಗುರಿ ಇಲ್ಲದೆ ನಡೆದು,
ಕಾಸೆಲ್ಲಾ ಖರ್ಚಾಗಿ,
ತನುವೆಲ್ಲಾ ಸುಸ್ತಾಗಿ,
ಹರ ಹರ ಎನ್ನುತ್ತಾ ಮನೆ ಸೇರಿದಾಗ
ಕೊನೆಗೂ ದೊರೆಯಿತು ಕೈಲಾಸ ಮೋಕ್ಷ,
ಅಪ್ಪನ ಕೋಪದ ಕಪಾಳ ಮೋಕ್ಷ.
*****
೧೧-೦೩-೧೯೭೬

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಹಾತ್ಮರು
Next post ನೀನು ಯಾರು?

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

cheap jordans|wholesale air max|wholesale jordans|wholesale jewelry|wholesale jerseys