Home / ಕವನ / ಕವಿತೆ / ಕಾಲೇಜು ವಿದ್ಯಾರ್ಥಿ

ಕಾಲೇಜು ವಿದ್ಯಾರ್ಥಿ

ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿ ನಾನು
ಯಾವುದೋ ಒಂದು ತರಗತಿಯಲ್ಲಿ ಓದುತ್ತಿದ್ದೇನೆ.
ಅಲ್ಲ ಅಲ್ಲ
ಯಾವುದೋ ಒಂದು ತರಗತಿಯಲ್ಲಿ ಇದ್ದೇನೆ.
ಅದೂ ಅಲ್ಲ
ಯಾವುದೋ ಒಂದು ತರಗತಿಯಲ್ಲಿ ನನ್ನ ಹೆಸರಿದೆ.

ತರಗತಿಗೆ ಹೋಗಲು ನನಗೆಲ್ಲಿ ಸಮಯ?
ಕಾಲೇಜಿಗೆ ಬಂದರೆ ನೂರಾರು ಕೆಲಸ
ಹತ್ತಾರು ಸಂಘಗಳ ಸದಸ್ಯನಾನು
ನಾಲ್ಕಾರು ಸಂಸ್ಥೆಗಳ ಕಾರ್ಯದರ್ಶಿ ನಾನು
ಮತ್ತೊಂದು ಪಾರ್ಟಿಯ ಅಧ್ಯಕ್ಷನೇ ನಾನು!

ಕಾಲೇಜಿಗೆ ಬಂದೆ, ಪ್ರಿನ್ಸಿಪಾಲರ ಕಂಡೆ,
ನನ್ನೆಲ್ಲ ವಿಷಯಗಳ ಬಗ್ಗೆ ಮಾತನಾಡಿದೆ,
ಉಳಿದೆಲ್ಲ ಶಿಕ್ಷಕರ ಬಳಿ ಹೋಗಿ ಬಂದೆ,
ಎಷ್ಟೆಲ್ಲ ವಿಷಯಗಳ ಚರ್ಚಿಸಿ ಬಂದೆ
ನಾಲ್ಕಾರು ಗೆಳೆಯರೊಡನೆ ಹರಟುತ್ತಾ ನಿಂತೆ.
ಸಂಗೀತ, ನಾಟಕ, ನೃತ್ಯಗಳ ಬಗ್ಗೆ,
ಚುನಾವಣೆ, ಗ್ರಂಥಾಲಯ, ವಾಚನಾಲಯಗಳ ಬಗ್ಗೆ
ಫ್ರ್‍ಈಶಿಪ್ಪು, ಸ್ಕಾಲರ್‌ಶಿಪ್ಪು, ಲೋನುಗಳ ಬಗ್ಗೆ,
ಭಾಷಣ, ಬಹುಮಾನ, ಸನ್ಮಾನಗಳ ಬಗ್ಗೆ,
ಎನ್ನೆಸ್ಸೆಸ್, ಎನ್ಸೀಸಿ, ಸ್ಪೋರ್ಟುಗಳ ಬಗ್ಗೆ
ಕ್ರಿಕೆಟ್ಟು, ಫುಟ್ ಬಾಲು, ಟೆನ್ನಿಸುಗಳ ಬಗ್ಗೆ
ಗ್ರೂಪ್ ಸಾಂಗ್ಸು, ಗ್ರೂಪ್ ಡಾನ್ಸುಗಳ ಬಗ್ಗೆ
ಏನೆಲ್ಲ ಚಿಂತೆಯು ಎನಗೆ
ವರ್ಷವಿಡೀ ಇರುವುದು ಕಾರ್ಯ ನನಗೆ.

ಜುಲೈನಲ್ಲಿ ಕಾಲೇಜಿಗೆ ಸೇರಿದರೆ ಆಯ್ತು
ಆಗಸ್ಟ್‌ನಲ್ಲಿ ಚುನಾವಣೆಗಳು, ನಾಟಕಗಳು,
ಸೆಪ್ಟೆಂಬರ್‌ನಲ್ಲಿ ತಪ್ಪದೆ ವಾರ್ಷಿಕ ಮುಷ್ಕರ
ಅಕ್ಟೋಬರ್‌ವನ್ನೆಲ್ಲ ರಜದಲ್ಲಿ ಕಳೆದು
ನವೆಂಬರ್‌ನಲ್ಲಿ ಅವಸರದ ಪ್ರವಾಸ ಹೋಗಿ ಬಂದು,
ಡಿಸೆಂಬರ್‌ನಲ್ಲಿ, ನವೆಂಬರ್‌ನ ರಾಜ್ಯೋತ್ಸವ ಮಾಡಿ,
ಜನವರಿಯಲ್ಲಿ ಕ್ರೀಡಾಕೂಟ, ವಾರ್ಷಿಕೋತ್ಸವ ಮಾಡಿ
ಫೆಬ್ರವರಿಯಲ್ಲಿ ಸ್ಪೆಷಲ್ ಕ್ಲಾಸುಗಳ ಚಂಡಿ ಕಾಡಿ
ಮಾರ್ಚ್‌ನಲ್ಲಿ! ಓ ಭಯವಾಗುತಿದೆ ಎನಗೆ
ಭೂತ ಬಂತು ನೋಡಿರಲ್ಲಿ. “ಪರೀಕ್ಷೆ”!
*****
೧೨-೦೧-೧೯೭೫

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...