Home / ಕವನ / ಕವಿತೆ / ಕಾಲೇಜು ವಿದ್ಯಾರ್ಥಿ

ಕಾಲೇಜು ವಿದ್ಯಾರ್ಥಿ

ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿ ನಾನು
ಯಾವುದೋ ಒಂದು ತರಗತಿಯಲ್ಲಿ ಓದುತ್ತಿದ್ದೇನೆ.
ಅಲ್ಲ ಅಲ್ಲ
ಯಾವುದೋ ಒಂದು ತರಗತಿಯಲ್ಲಿ ಇದ್ದೇನೆ.
ಅದೂ ಅಲ್ಲ
ಯಾವುದೋ ಒಂದು ತರಗತಿಯಲ್ಲಿ ನನ್ನ ಹೆಸರಿದೆ.

ತರಗತಿಗೆ ಹೋಗಲು ನನಗೆಲ್ಲಿ ಸಮಯ?
ಕಾಲೇಜಿಗೆ ಬಂದರೆ ನೂರಾರು ಕೆಲಸ
ಹತ್ತಾರು ಸಂಘಗಳ ಸದಸ್ಯನಾನು
ನಾಲ್ಕಾರು ಸಂಸ್ಥೆಗಳ ಕಾರ್ಯದರ್ಶಿ ನಾನು
ಮತ್ತೊಂದು ಪಾರ್ಟಿಯ ಅಧ್ಯಕ್ಷನೇ ನಾನು!

ಕಾಲೇಜಿಗೆ ಬಂದೆ, ಪ್ರಿನ್ಸಿಪಾಲರ ಕಂಡೆ,
ನನ್ನೆಲ್ಲ ವಿಷಯಗಳ ಬಗ್ಗೆ ಮಾತನಾಡಿದೆ,
ಉಳಿದೆಲ್ಲ ಶಿಕ್ಷಕರ ಬಳಿ ಹೋಗಿ ಬಂದೆ,
ಎಷ್ಟೆಲ್ಲ ವಿಷಯಗಳ ಚರ್ಚಿಸಿ ಬಂದೆ
ನಾಲ್ಕಾರು ಗೆಳೆಯರೊಡನೆ ಹರಟುತ್ತಾ ನಿಂತೆ.
ಸಂಗೀತ, ನಾಟಕ, ನೃತ್ಯಗಳ ಬಗ್ಗೆ,
ಚುನಾವಣೆ, ಗ್ರಂಥಾಲಯ, ವಾಚನಾಲಯಗಳ ಬಗ್ಗೆ
ಫ್ರ್‍ಈಶಿಪ್ಪು, ಸ್ಕಾಲರ್‌ಶಿಪ್ಪು, ಲೋನುಗಳ ಬಗ್ಗೆ,
ಭಾಷಣ, ಬಹುಮಾನ, ಸನ್ಮಾನಗಳ ಬಗ್ಗೆ,
ಎನ್ನೆಸ್ಸೆಸ್, ಎನ್ಸೀಸಿ, ಸ್ಪೋರ್ಟುಗಳ ಬಗ್ಗೆ
ಕ್ರಿಕೆಟ್ಟು, ಫುಟ್ ಬಾಲು, ಟೆನ್ನಿಸುಗಳ ಬಗ್ಗೆ
ಗ್ರೂಪ್ ಸಾಂಗ್ಸು, ಗ್ರೂಪ್ ಡಾನ್ಸುಗಳ ಬಗ್ಗೆ
ಏನೆಲ್ಲ ಚಿಂತೆಯು ಎನಗೆ
ವರ್ಷವಿಡೀ ಇರುವುದು ಕಾರ್ಯ ನನಗೆ.

ಜುಲೈನಲ್ಲಿ ಕಾಲೇಜಿಗೆ ಸೇರಿದರೆ ಆಯ್ತು
ಆಗಸ್ಟ್‌ನಲ್ಲಿ ಚುನಾವಣೆಗಳು, ನಾಟಕಗಳು,
ಸೆಪ್ಟೆಂಬರ್‌ನಲ್ಲಿ ತಪ್ಪದೆ ವಾರ್ಷಿಕ ಮುಷ್ಕರ
ಅಕ್ಟೋಬರ್‌ವನ್ನೆಲ್ಲ ರಜದಲ್ಲಿ ಕಳೆದು
ನವೆಂಬರ್‌ನಲ್ಲಿ ಅವಸರದ ಪ್ರವಾಸ ಹೋಗಿ ಬಂದು,
ಡಿಸೆಂಬರ್‌ನಲ್ಲಿ, ನವೆಂಬರ್‌ನ ರಾಜ್ಯೋತ್ಸವ ಮಾಡಿ,
ಜನವರಿಯಲ್ಲಿ ಕ್ರೀಡಾಕೂಟ, ವಾರ್ಷಿಕೋತ್ಸವ ಮಾಡಿ
ಫೆಬ್ರವರಿಯಲ್ಲಿ ಸ್ಪೆಷಲ್ ಕ್ಲಾಸುಗಳ ಚಂಡಿ ಕಾಡಿ
ಮಾರ್ಚ್‌ನಲ್ಲಿ! ಓ ಭಯವಾಗುತಿದೆ ಎನಗೆ
ಭೂತ ಬಂತು ನೋಡಿರಲ್ಲಿ. “ಪರೀಕ್ಷೆ”!
*****
೧೨-೦೧-೧೯೭೫

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...