Home / ಕವನ / ಕವಿತೆ / ಕಾಲೇಜು ವಿದ್ಯಾರ್ಥಿ

ಕಾಲೇಜು ವಿದ್ಯಾರ್ಥಿ

ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿ ನಾನು
ಯಾವುದೋ ಒಂದು ತರಗತಿಯಲ್ಲಿ ಓದುತ್ತಿದ್ದೇನೆ.
ಅಲ್ಲ ಅಲ್ಲ
ಯಾವುದೋ ಒಂದು ತರಗತಿಯಲ್ಲಿ ಇದ್ದೇನೆ.
ಅದೂ ಅಲ್ಲ
ಯಾವುದೋ ಒಂದು ತರಗತಿಯಲ್ಲಿ ನನ್ನ ಹೆಸರಿದೆ.

ತರಗತಿಗೆ ಹೋಗಲು ನನಗೆಲ್ಲಿ ಸಮಯ?
ಕಾಲೇಜಿಗೆ ಬಂದರೆ ನೂರಾರು ಕೆಲಸ
ಹತ್ತಾರು ಸಂಘಗಳ ಸದಸ್ಯನಾನು
ನಾಲ್ಕಾರು ಸಂಸ್ಥೆಗಳ ಕಾರ್ಯದರ್ಶಿ ನಾನು
ಮತ್ತೊಂದು ಪಾರ್ಟಿಯ ಅಧ್ಯಕ್ಷನೇ ನಾನು!

ಕಾಲೇಜಿಗೆ ಬಂದೆ, ಪ್ರಿನ್ಸಿಪಾಲರ ಕಂಡೆ,
ನನ್ನೆಲ್ಲ ವಿಷಯಗಳ ಬಗ್ಗೆ ಮಾತನಾಡಿದೆ,
ಉಳಿದೆಲ್ಲ ಶಿಕ್ಷಕರ ಬಳಿ ಹೋಗಿ ಬಂದೆ,
ಎಷ್ಟೆಲ್ಲ ವಿಷಯಗಳ ಚರ್ಚಿಸಿ ಬಂದೆ
ನಾಲ್ಕಾರು ಗೆಳೆಯರೊಡನೆ ಹರಟುತ್ತಾ ನಿಂತೆ.
ಸಂಗೀತ, ನಾಟಕ, ನೃತ್ಯಗಳ ಬಗ್ಗೆ,
ಚುನಾವಣೆ, ಗ್ರಂಥಾಲಯ, ವಾಚನಾಲಯಗಳ ಬಗ್ಗೆ
ಫ್ರ್‍ಈಶಿಪ್ಪು, ಸ್ಕಾಲರ್‌ಶಿಪ್ಪು, ಲೋನುಗಳ ಬಗ್ಗೆ,
ಭಾಷಣ, ಬಹುಮಾನ, ಸನ್ಮಾನಗಳ ಬಗ್ಗೆ,
ಎನ್ನೆಸ್ಸೆಸ್, ಎನ್ಸೀಸಿ, ಸ್ಪೋರ್ಟುಗಳ ಬಗ್ಗೆ
ಕ್ರಿಕೆಟ್ಟು, ಫುಟ್ ಬಾಲು, ಟೆನ್ನಿಸುಗಳ ಬಗ್ಗೆ
ಗ್ರೂಪ್ ಸಾಂಗ್ಸು, ಗ್ರೂಪ್ ಡಾನ್ಸುಗಳ ಬಗ್ಗೆ
ಏನೆಲ್ಲ ಚಿಂತೆಯು ಎನಗೆ
ವರ್ಷವಿಡೀ ಇರುವುದು ಕಾರ್ಯ ನನಗೆ.

ಜುಲೈನಲ್ಲಿ ಕಾಲೇಜಿಗೆ ಸೇರಿದರೆ ಆಯ್ತು
ಆಗಸ್ಟ್‌ನಲ್ಲಿ ಚುನಾವಣೆಗಳು, ನಾಟಕಗಳು,
ಸೆಪ್ಟೆಂಬರ್‌ನಲ್ಲಿ ತಪ್ಪದೆ ವಾರ್ಷಿಕ ಮುಷ್ಕರ
ಅಕ್ಟೋಬರ್‌ವನ್ನೆಲ್ಲ ರಜದಲ್ಲಿ ಕಳೆದು
ನವೆಂಬರ್‌ನಲ್ಲಿ ಅವಸರದ ಪ್ರವಾಸ ಹೋಗಿ ಬಂದು,
ಡಿಸೆಂಬರ್‌ನಲ್ಲಿ, ನವೆಂಬರ್‌ನ ರಾಜ್ಯೋತ್ಸವ ಮಾಡಿ,
ಜನವರಿಯಲ್ಲಿ ಕ್ರೀಡಾಕೂಟ, ವಾರ್ಷಿಕೋತ್ಸವ ಮಾಡಿ
ಫೆಬ್ರವರಿಯಲ್ಲಿ ಸ್ಪೆಷಲ್ ಕ್ಲಾಸುಗಳ ಚಂಡಿ ಕಾಡಿ
ಮಾರ್ಚ್‌ನಲ್ಲಿ! ಓ ಭಯವಾಗುತಿದೆ ಎನಗೆ
ಭೂತ ಬಂತು ನೋಡಿರಲ್ಲಿ. “ಪರೀಕ್ಷೆ”!
*****
೧೨-೦೧-೧೯೭೫

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...