Home / ಕವನ / ಕವಿತೆ / ಪತ್ರ ವಾಹಿನಿ

ಪತ್ರ ವಾಹಿನಿ

ದೂರದ ಗೋವೆಯಿಂದ ವಧು ಬಂದಿತ್ತು
ಪ್ರಥಮ ನೋಟದಲೆನ್ನ ಮನವ ಗೆದ್ದಿತ್ತು.
ಕಣ್ಗಳೇ ಆಡಿದವು ನೂರಾರು ಮಾತು,
ಆಳವಾಗಿ ಬೇರೂರಿತು ಪ್ರೇಮ, ಹೃದಯಗಳು ಬೆರೆತು.
ಬಾಂಧವ್ಯಕೆ ಭಾಷೆಯ ಬಂಧನವಿಲ್ಲ
ಹಲವು ಭಾಷೆಗಳಲ್ಲಿ ಹರಿಯಿತು ಪತ್ರ ಪ್ರವಾಹ
ವ್ಯವಸ್ಥಿತ ಮದುವೆ ಆಯಿತು ಪ್ರೇಮ ವಿವಾಹ
ನಿಶ್ಚಿತದ ಬಳಿಕ ಉಳಿದಿದ್ದುದು
ನೂರು ದೀರ್ಘ ದಿನಗಳು, ಬರೆದುದು ನೂರೇ ಪತ್ರ!
ಇಬ್ಬರದೂ ಸೇರಿ ಸಾವಿರ ಪುಟಗಳು ಮಾತ್ರ
ಕಥೆ, ಕವನ, ಕನಸು, ಹಗಲುಗನಸು,
ನಾಟಕ, ರೂಪಕ, ಧಾರಾವಾಹಿ…
ಏನೆಲ್ಲ ರೂಪಗಳಲ್ಲಿ ಹರಿಯಿತು ಪತ್ರಧಾರೆ.
ದಿನ ದಿನವೂ ಕಾಯುತ್ತಿದ್ದೆವು ಪತ್ರಕ್ಕಾಗಿ
ರಾಮನಿಗಾಗಿ ಕಾದ ಶಬರಿಯಂತೆ
ಮಳೆಗಾಗಿ ಕಾದ ಚಾತಕ ಪಕ್ಷಿಯಂತೆ.
ಆಫೀಸಿನಲ್ಲಿ ಮನೆಯಲ್ಲಿ ಎಲ್ಲೆಲ್ಲೂ
ಅದೇ ಮಾತು – ಗುಲ್ಲೋ ಗುಲ್ಲು.
ಯಾರೂ ಆಗದ ಲಗ್ನ ಇವರೇ ಆದಂತೆ
ಎಂದವರ ಅಸೂಯಾಗ್ನಿಗೆ ತುಪ್ಪ ಹುಯ್ದಂತೆ
ಪತ್ರ ರೂಪದಿ ಭಾವಗಳು ಹೊರ ಹೊಮ್ಮಿ ಪಸರಿಸಿ
ವಿರಹ ವೇದನೆಯ ತಣಿಸಿತ್ತು
ಮನಕೆ-ಮನವ ತಲುಪಿಸಿತ್ತು
ಸುಂದರ ವೈವಾಹಿಕ ಜೀವನಕೆ
ಭದ್ರ ಬುನಾದಿಯ ಹಾಕಿತ್ತು
ಮಧುರ ಮಿಲನವು ಹೃದಯಗಳ ಬೆಸೆದಿತ್ತು
*****
೨೦-೦೩-೧೯೮೪

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...