Home / ಕವನ / ಕವಿತೆ / ಪತ್ರ ವಾಹಿನಿ

ಪತ್ರ ವಾಹಿನಿ

ದೂರದ ಗೋವೆಯಿಂದ ವಧು ಬಂದಿತ್ತು
ಪ್ರಥಮ ನೋಟದಲೆನ್ನ ಮನವ ಗೆದ್ದಿತ್ತು.
ಕಣ್ಗಳೇ ಆಡಿದವು ನೂರಾರು ಮಾತು,
ಆಳವಾಗಿ ಬೇರೂರಿತು ಪ್ರೇಮ, ಹೃದಯಗಳು ಬೆರೆತು.
ಬಾಂಧವ್ಯಕೆ ಭಾಷೆಯ ಬಂಧನವಿಲ್ಲ
ಹಲವು ಭಾಷೆಗಳಲ್ಲಿ ಹರಿಯಿತು ಪತ್ರ ಪ್ರವಾಹ
ವ್ಯವಸ್ಥಿತ ಮದುವೆ ಆಯಿತು ಪ್ರೇಮ ವಿವಾಹ
ನಿಶ್ಚಿತದ ಬಳಿಕ ಉಳಿದಿದ್ದುದು
ನೂರು ದೀರ್ಘ ದಿನಗಳು, ಬರೆದುದು ನೂರೇ ಪತ್ರ!
ಇಬ್ಬರದೂ ಸೇರಿ ಸಾವಿರ ಪುಟಗಳು ಮಾತ್ರ
ಕಥೆ, ಕವನ, ಕನಸು, ಹಗಲುಗನಸು,
ನಾಟಕ, ರೂಪಕ, ಧಾರಾವಾಹಿ…
ಏನೆಲ್ಲ ರೂಪಗಳಲ್ಲಿ ಹರಿಯಿತು ಪತ್ರಧಾರೆ.
ದಿನ ದಿನವೂ ಕಾಯುತ್ತಿದ್ದೆವು ಪತ್ರಕ್ಕಾಗಿ
ರಾಮನಿಗಾಗಿ ಕಾದ ಶಬರಿಯಂತೆ
ಮಳೆಗಾಗಿ ಕಾದ ಚಾತಕ ಪಕ್ಷಿಯಂತೆ.
ಆಫೀಸಿನಲ್ಲಿ ಮನೆಯಲ್ಲಿ ಎಲ್ಲೆಲ್ಲೂ
ಅದೇ ಮಾತು – ಗುಲ್ಲೋ ಗುಲ್ಲು.
ಯಾರೂ ಆಗದ ಲಗ್ನ ಇವರೇ ಆದಂತೆ
ಎಂದವರ ಅಸೂಯಾಗ್ನಿಗೆ ತುಪ್ಪ ಹುಯ್ದಂತೆ
ಪತ್ರ ರೂಪದಿ ಭಾವಗಳು ಹೊರ ಹೊಮ್ಮಿ ಪಸರಿಸಿ
ವಿರಹ ವೇದನೆಯ ತಣಿಸಿತ್ತು
ಮನಕೆ-ಮನವ ತಲುಪಿಸಿತ್ತು
ಸುಂದರ ವೈವಾಹಿಕ ಜೀವನಕೆ
ಭದ್ರ ಬುನಾದಿಯ ಹಾಕಿತ್ತು
ಮಧುರ ಮಿಲನವು ಹೃದಯಗಳ ಬೆಸೆದಿತ್ತು
*****
೨೦-೦೩-೧೯೮೪

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...