Home / ಕವನ / ಕವಿತೆ / ಪತ್ರ ವಾಹಿನಿ

ಪತ್ರ ವಾಹಿನಿ

ದೂರದ ಗೋವೆಯಿಂದ ವಧು ಬಂದಿತ್ತು
ಪ್ರಥಮ ನೋಟದಲೆನ್ನ ಮನವ ಗೆದ್ದಿತ್ತು.
ಕಣ್ಗಳೇ ಆಡಿದವು ನೂರಾರು ಮಾತು,
ಆಳವಾಗಿ ಬೇರೂರಿತು ಪ್ರೇಮ, ಹೃದಯಗಳು ಬೆರೆತು.
ಬಾಂಧವ್ಯಕೆ ಭಾಷೆಯ ಬಂಧನವಿಲ್ಲ
ಹಲವು ಭಾಷೆಗಳಲ್ಲಿ ಹರಿಯಿತು ಪತ್ರ ಪ್ರವಾಹ
ವ್ಯವಸ್ಥಿತ ಮದುವೆ ಆಯಿತು ಪ್ರೇಮ ವಿವಾಹ
ನಿಶ್ಚಿತದ ಬಳಿಕ ಉಳಿದಿದ್ದುದು
ನೂರು ದೀರ್ಘ ದಿನಗಳು, ಬರೆದುದು ನೂರೇ ಪತ್ರ!
ಇಬ್ಬರದೂ ಸೇರಿ ಸಾವಿರ ಪುಟಗಳು ಮಾತ್ರ
ಕಥೆ, ಕವನ, ಕನಸು, ಹಗಲುಗನಸು,
ನಾಟಕ, ರೂಪಕ, ಧಾರಾವಾಹಿ…
ಏನೆಲ್ಲ ರೂಪಗಳಲ್ಲಿ ಹರಿಯಿತು ಪತ್ರಧಾರೆ.
ದಿನ ದಿನವೂ ಕಾಯುತ್ತಿದ್ದೆವು ಪತ್ರಕ್ಕಾಗಿ
ರಾಮನಿಗಾಗಿ ಕಾದ ಶಬರಿಯಂತೆ
ಮಳೆಗಾಗಿ ಕಾದ ಚಾತಕ ಪಕ್ಷಿಯಂತೆ.
ಆಫೀಸಿನಲ್ಲಿ ಮನೆಯಲ್ಲಿ ಎಲ್ಲೆಲ್ಲೂ
ಅದೇ ಮಾತು – ಗುಲ್ಲೋ ಗುಲ್ಲು.
ಯಾರೂ ಆಗದ ಲಗ್ನ ಇವರೇ ಆದಂತೆ
ಎಂದವರ ಅಸೂಯಾಗ್ನಿಗೆ ತುಪ್ಪ ಹುಯ್ದಂತೆ
ಪತ್ರ ರೂಪದಿ ಭಾವಗಳು ಹೊರ ಹೊಮ್ಮಿ ಪಸರಿಸಿ
ವಿರಹ ವೇದನೆಯ ತಣಿಸಿತ್ತು
ಮನಕೆ-ಮನವ ತಲುಪಿಸಿತ್ತು
ಸುಂದರ ವೈವಾಹಿಕ ಜೀವನಕೆ
ಭದ್ರ ಬುನಾದಿಯ ಹಾಕಿತ್ತು
ಮಧುರ ಮಿಲನವು ಹೃದಯಗಳ ಬೆಸೆದಿತ್ತು
*****
೨೦-೦೩-೧೯೮೪

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...