ಪತ್ರ ವಾಹಿನಿ

ದೂರದ ಗೋವೆಯಿಂದ ವಧು ಬಂದಿತ್ತು
ಪ್ರಥಮ ನೋಟದಲೆನ್ನ ಮನವ ಗೆದ್ದಿತ್ತು.
ಕಣ್ಗಳೇ ಆಡಿದವು ನೂರಾರು ಮಾತು,
ಆಳವಾಗಿ ಬೇರೂರಿತು ಪ್ರೇಮ, ಹೃದಯಗಳು ಬೆರೆತು.
ಬಾಂಧವ್ಯಕೆ ಭಾಷೆಯ ಬಂಧನವಿಲ್ಲ
ಹಲವು ಭಾಷೆಗಳಲ್ಲಿ ಹರಿಯಿತು ಪತ್ರ ಪ್ರವಾಹ
ವ್ಯವಸ್ಥಿತ ಮದುವೆ ಆಯಿತು ಪ್ರೇಮ ವಿವಾಹ
ನಿಶ್ಚಿತದ ಬಳಿಕ ಉಳಿದಿದ್ದುದು
ನೂರು ದೀರ್ಘ ದಿನಗಳು, ಬರೆದುದು ನೂರೇ ಪತ್ರ!
ಇಬ್ಬರದೂ ಸೇರಿ ಸಾವಿರ ಪುಟಗಳು ಮಾತ್ರ
ಕಥೆ, ಕವನ, ಕನಸು, ಹಗಲುಗನಸು,
ನಾಟಕ, ರೂಪಕ, ಧಾರಾವಾಹಿ…
ಏನೆಲ್ಲ ರೂಪಗಳಲ್ಲಿ ಹರಿಯಿತು ಪತ್ರಧಾರೆ.
ದಿನ ದಿನವೂ ಕಾಯುತ್ತಿದ್ದೆವು ಪತ್ರಕ್ಕಾಗಿ
ರಾಮನಿಗಾಗಿ ಕಾದ ಶಬರಿಯಂತೆ
ಮಳೆಗಾಗಿ ಕಾದ ಚಾತಕ ಪಕ್ಷಿಯಂತೆ.
ಆಫೀಸಿನಲ್ಲಿ ಮನೆಯಲ್ಲಿ ಎಲ್ಲೆಲ್ಲೂ
ಅದೇ ಮಾತು – ಗುಲ್ಲೋ ಗುಲ್ಲು.
ಯಾರೂ ಆಗದ ಲಗ್ನ ಇವರೇ ಆದಂತೆ
ಎಂದವರ ಅಸೂಯಾಗ್ನಿಗೆ ತುಪ್ಪ ಹುಯ್ದಂತೆ
ಪತ್ರ ರೂಪದಿ ಭಾವಗಳು ಹೊರ ಹೊಮ್ಮಿ ಪಸರಿಸಿ
ವಿರಹ ವೇದನೆಯ ತಣಿಸಿತ್ತು
ಮನಕೆ-ಮನವ ತಲುಪಿಸಿತ್ತು
ಸುಂದರ ವೈವಾಹಿಕ ಜೀವನಕೆ
ಭದ್ರ ಬುನಾದಿಯ ಹಾಕಿತ್ತು
ಮಧುರ ಮಿಲನವು ಹೃದಯಗಳ ಬೆಸೆದಿತ್ತು
*****
೨೦-೦೩-೧೯೮೪

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಜಕಾರಣ ಮತ್ತು ಇನ್ನೊಂದು ಕಾರಣ
Next post ಹಕ್ಕಿ

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…