Home / ಕವನ / ಕವಿತೆ / ಪತ್ರ ವಾಹಿನಿ

ಪತ್ರ ವಾಹಿನಿ

ದೂರದ ಗೋವೆಯಿಂದ ವಧು ಬಂದಿತ್ತು
ಪ್ರಥಮ ನೋಟದಲೆನ್ನ ಮನವ ಗೆದ್ದಿತ್ತು.
ಕಣ್ಗಳೇ ಆಡಿದವು ನೂರಾರು ಮಾತು,
ಆಳವಾಗಿ ಬೇರೂರಿತು ಪ್ರೇಮ, ಹೃದಯಗಳು ಬೆರೆತು.
ಬಾಂಧವ್ಯಕೆ ಭಾಷೆಯ ಬಂಧನವಿಲ್ಲ
ಹಲವು ಭಾಷೆಗಳಲ್ಲಿ ಹರಿಯಿತು ಪತ್ರ ಪ್ರವಾಹ
ವ್ಯವಸ್ಥಿತ ಮದುವೆ ಆಯಿತು ಪ್ರೇಮ ವಿವಾಹ
ನಿಶ್ಚಿತದ ಬಳಿಕ ಉಳಿದಿದ್ದುದು
ನೂರು ದೀರ್ಘ ದಿನಗಳು, ಬರೆದುದು ನೂರೇ ಪತ್ರ!
ಇಬ್ಬರದೂ ಸೇರಿ ಸಾವಿರ ಪುಟಗಳು ಮಾತ್ರ
ಕಥೆ, ಕವನ, ಕನಸು, ಹಗಲುಗನಸು,
ನಾಟಕ, ರೂಪಕ, ಧಾರಾವಾಹಿ…
ಏನೆಲ್ಲ ರೂಪಗಳಲ್ಲಿ ಹರಿಯಿತು ಪತ್ರಧಾರೆ.
ದಿನ ದಿನವೂ ಕಾಯುತ್ತಿದ್ದೆವು ಪತ್ರಕ್ಕಾಗಿ
ರಾಮನಿಗಾಗಿ ಕಾದ ಶಬರಿಯಂತೆ
ಮಳೆಗಾಗಿ ಕಾದ ಚಾತಕ ಪಕ್ಷಿಯಂತೆ.
ಆಫೀಸಿನಲ್ಲಿ ಮನೆಯಲ್ಲಿ ಎಲ್ಲೆಲ್ಲೂ
ಅದೇ ಮಾತು – ಗುಲ್ಲೋ ಗುಲ್ಲು.
ಯಾರೂ ಆಗದ ಲಗ್ನ ಇವರೇ ಆದಂತೆ
ಎಂದವರ ಅಸೂಯಾಗ್ನಿಗೆ ತುಪ್ಪ ಹುಯ್ದಂತೆ
ಪತ್ರ ರೂಪದಿ ಭಾವಗಳು ಹೊರ ಹೊಮ್ಮಿ ಪಸರಿಸಿ
ವಿರಹ ವೇದನೆಯ ತಣಿಸಿತ್ತು
ಮನಕೆ-ಮನವ ತಲುಪಿಸಿತ್ತು
ಸುಂದರ ವೈವಾಹಿಕ ಜೀವನಕೆ
ಭದ್ರ ಬುನಾದಿಯ ಹಾಕಿತ್ತು
ಮಧುರ ಮಿಲನವು ಹೃದಯಗಳ ಬೆಸೆದಿತ್ತು
*****
೨೦-೦೩-೧೯೮೪

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...