ದೂರದ ಗೋವೆಯಿಂದ ವಧು ಬಂದಿತ್ತು
ಪ್ರಥಮ ನೋಟದಲೆನ್ನ ಮನವ ಗೆದ್ದಿತ್ತು.
ಕಣ್ಗಳೇ ಆಡಿದವು ನೂರಾರು ಮಾತು,
ಆಳವಾಗಿ ಬೇರೂರಿತು ಪ್ರೇಮ, ಹೃದಯಗಳು ಬೆರೆತು.
ಬಾಂಧವ್ಯಕೆ ಭಾಷೆಯ ಬಂಧನವಿಲ್ಲ
ಹಲವು ಭಾಷೆಗಳಲ್ಲಿ ಹರಿಯಿತು ಪತ್ರ ಪ್ರವಾಹ
ವ್ಯವಸ್ಥಿತ ಮದುವೆ ಆಯಿತು ಪ್ರೇಮ ವಿವಾಹ
ನಿಶ್ಚಿತದ ಬಳಿಕ ಉಳಿದಿದ್ದುದು
ನೂರು ದೀರ್ಘ ದಿನಗಳು, ಬರೆದುದು ನೂರೇ ಪತ್ರ!
ಇಬ್ಬರದೂ ಸೇರಿ ಸಾವಿರ ಪುಟಗಳು ಮಾತ್ರ
ಕಥೆ, ಕವನ, ಕನಸು, ಹಗಲುಗನಸು,
ನಾಟಕ, ರೂಪಕ, ಧಾರಾವಾಹಿ…
ಏನೆಲ್ಲ ರೂಪಗಳಲ್ಲಿ ಹರಿಯಿತು ಪತ್ರಧಾರೆ.
ದಿನ ದಿನವೂ ಕಾಯುತ್ತಿದ್ದೆವು ಪತ್ರಕ್ಕಾಗಿ
ರಾಮನಿಗಾಗಿ ಕಾದ ಶಬರಿಯಂತೆ
ಮಳೆಗಾಗಿ ಕಾದ ಚಾತಕ ಪಕ್ಷಿಯಂತೆ.
ಆಫೀಸಿನಲ್ಲಿ ಮನೆಯಲ್ಲಿ ಎಲ್ಲೆಲ್ಲೂ
ಅದೇ ಮಾತು – ಗುಲ್ಲೋ ಗುಲ್ಲು.
ಯಾರೂ ಆಗದ ಲಗ್ನ ಇವರೇ ಆದಂತೆ
ಎಂದವರ ಅಸೂಯಾಗ್ನಿಗೆ ತುಪ್ಪ ಹುಯ್ದಂತೆ
ಪತ್ರ ರೂಪದಿ ಭಾವಗಳು ಹೊರ ಹೊಮ್ಮಿ ಪಸರಿಸಿ
ವಿರಹ ವೇದನೆಯ ತಣಿಸಿತ್ತು
ಮನಕೆ-ಮನವ ತಲುಪಿಸಿತ್ತು
ಸುಂದರ ವೈವಾಹಿಕ ಜೀವನಕೆ
ಭದ್ರ ಬುನಾದಿಯ ಹಾಕಿತ್ತು
ಮಧುರ ಮಿಲನವು ಹೃದಯಗಳ ಬೆಸೆದಿತ್ತು
*****
೨೦-೦೩-೧೯೮೪
Related Post
ಸಣ್ಣ ಕತೆ
-
ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ
ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್ಗೆ ಕಾಲ್ಚೆಂಡು ಆಟ… Read more…
-
ಹೃದಯದ ತೀರ್ಪು
ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…
-
ಕುಟೀರವಾಣಿ
ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…
-
ಆವರ್ತನೆ
ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…
-
ಜೋತಿಷ್ಯ
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…