ದೂರದ ಗೋವೆಯಿಂದ ವಧು ಬಂದಿತ್ತು
ಪ್ರಥಮ ನೋಟದಲೆನ್ನ ಮನವ ಗೆದ್ದಿತ್ತು.
ಕಣ್ಗಳೇ ಆಡಿದವು ನೂರಾರು ಮಾತು,
ಆಳವಾಗಿ ಬೇರೂರಿತು ಪ್ರೇಮ, ಹೃದಯಗಳು ಬೆರೆತು.
ಬಾಂಧವ್ಯಕೆ ಭಾಷೆಯ ಬಂಧನವಿಲ್ಲ
ಹಲವು ಭಾಷೆಗಳಲ್ಲಿ ಹರಿಯಿತು ಪತ್ರ ಪ್ರವಾಹ
ವ್ಯವಸ್ಥಿತ ಮದುವೆ ಆಯಿತು ಪ್ರೇಮ ವಿವಾಹ
ನಿಶ್ಚಿತದ ಬಳಿಕ ಉಳಿದಿದ್ದುದು
ನೂರು ದೀರ್ಘ ದಿನಗಳು, ಬರೆದುದು ನೂರೇ ಪತ್ರ!
ಇಬ್ಬರದೂ ಸೇರಿ ಸಾವಿರ ಪುಟಗಳು ಮಾತ್ರ
ಕಥೆ, ಕವನ, ಕನಸು, ಹಗಲುಗನಸು,
ನಾಟಕ, ರೂಪಕ, ಧಾರಾವಾಹಿ…
ಏನೆಲ್ಲ ರೂಪಗಳಲ್ಲಿ ಹರಿಯಿತು ಪತ್ರಧಾರೆ.
ದಿನ ದಿನವೂ ಕಾಯುತ್ತಿದ್ದೆವು ಪತ್ರಕ್ಕಾಗಿ
ರಾಮನಿಗಾಗಿ ಕಾದ ಶಬರಿಯಂತೆ
ಮಳೆಗಾಗಿ ಕಾದ ಚಾತಕ ಪಕ್ಷಿಯಂತೆ.
ಆಫೀಸಿನಲ್ಲಿ ಮನೆಯಲ್ಲಿ ಎಲ್ಲೆಲ್ಲೂ
ಅದೇ ಮಾತು – ಗುಲ್ಲೋ ಗುಲ್ಲು.
ಯಾರೂ ಆಗದ ಲಗ್ನ ಇವರೇ ಆದಂತೆ
ಎಂದವರ ಅಸೂಯಾಗ್ನಿಗೆ ತುಪ್ಪ ಹುಯ್ದಂತೆ
ಪತ್ರ ರೂಪದಿ ಭಾವಗಳು ಹೊರ ಹೊಮ್ಮಿ ಪಸರಿಸಿ
ವಿರಹ ವೇದನೆಯ ತಣಿಸಿತ್ತು
ಮನಕೆ-ಮನವ ತಲುಪಿಸಿತ್ತು
ಸುಂದರ ವೈವಾಹಿಕ ಜೀವನಕೆ
ಭದ್ರ ಬುನಾದಿಯ ಹಾಕಿತ್ತು
ಮಧುರ ಮಿಲನವು ಹೃದಯಗಳ ಬೆಸೆದಿತ್ತು
*****
೨೦-೦೩-೧೯೮೪
Related Post
ಸಣ್ಣ ಕತೆ
-
ಗ್ರಹಕಥಾ
[ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…
-
ಧರ್ಮಸಂಸ್ಥಾಪನಾರ್ಥಾಯ
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…
-
ವರ್ಗಿನೋರು
ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…
-
ಶಾಕಿಂಗ್ ಪ್ರೇಮ ಪ್ರಕರಣ
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…
-
ಗಿಣಿಯ ಸಾಕ್ಷಿ
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…