Home / ಕವನ / ಕವಿತೆ / ತಂಗಿ

ತಂಗಿ

ಹೀಗಾಗಬಹುದೆಂದು
ನಾನೆಣಿಸಿರಲಿಲ್ಲ ಕನಸಿನಲ್ಲಿಯೂ.
ಒಡಹುಟ್ಟಿದ ತಂಗಿಯೆಂದು
ಅನ್ನವಿಟ್ಟು ಆದರಿಸಿದೆ,
ನಿನ್ನ ಉನ್ನತಿಯ ಬಯಸಿದೆ,
ನಿಯತ್ತಿನಿಂದ ಶ್ರಮಿಸಿದೆ,
ಮನಸಾರ ಹರಸಿದೆ.
ನನ್ನ ಸೇವಕರಾದ
ಕಲಾವಿದರನ್ನೂ, ತಂತ್ರಜ್ಞರನ್ನೂ
ನಿನ್ನ ಸೇವೆಗೆ ನೇಮಿಸಿದೆ.
ನನ್ನ ಆರಾಧಕನನ್ನೇ
ನಿನ್ನನಾಧರಿಸಲು ಬೇಡಿದೆ.
ನನ್ನ ಬೆಡಗು ಬಿನ್ನಾಣಗಳನ್ನೂ
ಮನರಂಜಿಪ ಕಾರ್ಯಕ್ರಮಗಳನ್ನೂ
ನನಗೂ ಕೊಟ್ಟೆ – ನಿನ್ನ
ಉನ್ನತಿಯ ಬಯಸಿದೆ.
ಮನಸಾರ ಹರಸಿದೆ.
ಆದರೆ ಎಂತಹ ಘೋರ ಫಲಿತಾಂಶ!
ನನ್ನ ಪತಿ “ಶೋತೃ” ಮೈ ಮರೆತ
ನಿನ್ನ ರೂಪ ಲಾವಣ್ಯದಲಿ!
ಮರುಳಾದ ನಿನ್ನ ಒನಪು, ವೈಯಾರಕ್ಕೆ
ನನ್ನ ಮರೆಯುತ, ನಿನ್ನೆಡೆಗೆ
ಬಹು ಬೇಗ ಸರಿದ… ನನ್ನಿನಿಯ
“ಶೋತೃ ಬಾಂಧವ” ನಿನ್ನ
“ಪ್ರಿಯ ವೀಕ್ಷಕ”ನಾದ!
ನನ್ನ ಹಿರಿಮೆ, ಆಕರ್ಷಣೆ
ಬರುಬರುತ್ತಾ ಕಡಿಮೆಯಾಗಿ,
ನವ ಯುವತಿ ನೀನಾದೆ
“ದೂರದರ್ಶನ” ರಾಣಿ!
ಗರತಿ ನಾ ಮೂಲೆಗುಂಪಾದೆ
ನಿನ್ನ ನತದೃಷ್ಟ ಹಿರಿಯಕ್ಕ
“ಆಕಾಶವಾಣಿ”!
*****
೧೪-೦೬-೧೯೮೫

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...