ರಕ್ಷಕ

ಶಿಕ್ಷಕ… ನೀ… ರಕ್ಷಕ
ಭವ್ಯ ಭಾರತದ…
ಅರಳುವ ಕುಡಿಗಳ ಆರಾಧಕ

ನಿನ್ನ ರಕ್ಷೆಯಲಿ
ಮಕ್ಕಳು ಅರಿತು ಬೆರೆತು
ವಿದ್ಯೆಯ ಕಲಿತು ನುರಿತರೆ
ಬೆಳೆಯುವದು ಬಾನೆತ್ತರಕೆ…

ಪ್ರೀತಿ ವಾತ್ಸಲ್ಯ
ಮಕ್ಕಳೊಡನೆ ಹಂಚಿಕೊಳ್ಳುತ
ನೀರುಣಿಸಿ ಪೋಷಿಸುವ…
ಕುಶಲ ಕಲೆಯ ತೋಟಿಗ ನೀನು

ಶಾಂತಿ ಸಮತೆ ಮಂತ್ರ ಹೇಳುವ
ಸೌಹಾರ್ದತೆಯ ಸೌಮ್ಯಮೂರ್ತಿ
ಅನಕ್ಷರತೆಯನು ಆಳಕ್ಕೆ ಅಟ್ಟಿ
ಅಕ್ಷರಗಳ ಸಾಕ್ಷಾರಗೊಳಿಸುವ
ಸಾಕಾರಮೂರ್ತಿ ಚತುರಶಿಲ್ಪಿ ನೀನು

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಗೂ……
Next post `ಕಾಯಮಾಯದ ಹಾಡು’ – ದೇಸಿಯ ಹೊಸ ಭಾಷ್ಯ

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…