ಅನಂತರ

ನಲವತ್ತು ವರ್ಷಗಳ ಅನಂತರ
ಭೇಟಿಯಾದರು
ಪರಮಾಪ್ತ ಗೆಳೆಯರು
ಬಾಲ್ಯ ಯೌವನ ನೆನೆಸಿಕೊಂಡು
ಮನಸಾರೆ ನಕ್ಕರು.
“ನಮ್ಮ ಸಹಪಾಠಿ ರೂಪ,
ಈಗ ಎಲ್ಲಿದ್ದಾಳೋ ಪಾಪ”
ವಿಷಾದದನಗೆ ನಕ್ಕ
ಮೊದಲ ಮುದುಕ.
“ಅಡುಗೆ ಮನೇಲಿದಾಳೆ
ಆ ನನ್ನ ರೂಪ –
ನಿನ್ನ ಹೆಸರೆತ್ತಿದರೆ
ಅವಳಿಗೆ ಎಲ್ಲಿಲ್ಲದ ಕೋಪ!”
ಚುರುಕು ಮುಟ್ಟಿಸಿದ
ಎರಡನೆ ಮುದುಕ.
ಕಕ್ಕಾಬಿಕ್ಕಿಯಾದ ವೃದ್ದ
“ಇದೀಗ ಬಂದೆ” ಎಂದು ಎದ್ದ
ತಿರುಗಿನೋಡದೆ ಓಡಿದ!
*****
೧೦-೧೨-೧೯೯೨

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅನ್ನ ಮತ್ತು ಸ್ವಾತಂತ್ರ್ಯ
Next post ಕನ್ನಡಾಂಬೆಗೆ ನುಡಿ ನಮನ

ಸಣ್ಣ ಕತೆ

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…