ಮಾತು ಮೌನವಾಗುತ್ತದೆ

-ರವಿ ಕೋಟಾರಗಸ್ತಿ

ಮಾತು ಮೌನವಾಗುತ್ತಿದೆ
ದಿನ.. ದಿನವು ಕ್ಷಣ.. ಕ್ಷಣವು
ಜಗದೆಲ್ಲೆಡೆ ಬಾಯಿ ಚಾಚುತಿಹ
ಕೋಮು-ಮತೀಯ ವಿಷ ಜಂತುವಿನ
ಉದ್ದನೆಯ ಕರಿ ನಾಲಗೆಯ ಕಂಡು…

ಮಾತು ಮೌನವಾಗುತ್ತಿದೆ
ನಾಡಿನ ಉದ್ದಗಲು…
ಶಾಂತಿ… ಸೌಹಾರ್ದತೆ ದೂಡಿ ಧರ್ಮದ
ಹೆಸರಲಿ ಜಾತಿ-ರಾಜಕೀಯ ಬೀಜ
ಬಿತ್ತಿ, ಕಳೆಯ ಬೆಳೆಯುವದನ್ನು ಕಂಡು.

ಮಾತು ಮೌನವಾಗುತ್ತಿದೆ
ಬದುಕಿನ ಹಸಿರು ಉಸಿರಾಗಿರುವ
ಪ್ರಕೃತಿ ಸಿರಿ ಪರಿಸರಕೆ
ಬೆಂಕಿಯಿಡುತ ಬೆಂದು
ಬರಡಾಗುತಿಹ ಮನುಕುಲ ಕಂಡು
ಮಾತು ಮೌನವಾಗುತ್ತಿದೆ.

ಜನನಿ… ಸಹೋದರಿ…
ಒಡಲ ಕುಡಿ… ಬಾಂಧವ್ಯ ಸವಿ ಅರಿಯದ
ಕ್ಷಣ… ದೇಹದ ತೃಷೆಗಾಗಿ
ಮಾರಾಟ ಮಾಡುವ ಭಂಡರ ಕಂಡು.

ಮಾತು ಮೌನವಾಗುತ್ತಿದೆ
ಕೆಂಪು ದೀಪದಡಿ ನಲುಗುತಿಹ
ಕಣ್ಣುಮುಚ್ಚಿ ಬೇಯುತಿಹ
ತನು… ಮನಗಳ ಆಳದ ನೋವು
ಕೇಳದ… ಕುರುಡಾಗಿಹ ಸಮಾಜ ಕಂಡು.

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿತ್ಯ ಚೈತ್ರ
Next post ಕರುಣಾಮೃತ ರಸ ರುಚಿಕರದೋಗರ

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

cheap jordans|wholesale air max|wholesale jordans|wholesale jewelry|wholesale jerseys