ಗೆಳೆಯ

ಮುಂಜಾವಿನಮಂಜಿನಂತೆ
ತುಂತುರ ಮಳೆ ಹನಿಯಂತೆ
ನೈದಿಲೆಯ ಚಲುವಿನಂತೆ
ಒಲವು ಸೂಸುತಾ ಮರೆಯಾದೆ

ಸ್ನೇಹ-ಪ್ರೀತಿಗಳ
ಸಂಗಮದ ಸಾಕಾರದಲಿ
ಫಲಾಪೇಕ್ಷ ಬಯಸದ
ನಿರ್‍ಮಲ ಸ್ನೇಹ ಸೇತುವೆ

ಬದುಕು-ಬವಣೆಗಳೆನ್ನದೆ
ಜನಸ್ಪಂದನೆಯಲಿ ಸಂತಸ ಕಾಣುತ
ನಂಬಿಗೆಯ ಬಂಧನದ
ಬಾಂಧವ್ಯದ ಕ್ಷೀರ… ಧಾರೆ…

ನಗುತ ಬೆರೆಯುತಲೆ
ಜತೆ ಜತೆ ಸಾಗುತ..
ಸಂತಸದ ಸಂಭ್ರಮದಿ
ಮರೆಯಾದ ಕಾಣದ ಸೆಳೆತಕೆ

ಹಲವು ಹತ್ತು ಕನಸುಗಳ
ಕನ್ನಡ ಮರಾಠಿಗರ ಮನಗೆದ್ದ
ಗರಿ ಮುಡಿಸುವ ಗೆಳೆತನದ
ಸುಧಾಮ-ಸಂಕಷ್ಟದ… ಚಾಣಕ್ಯ

ಪಂಚಭೂತದಲಿ ಲೀನವಾಗಿ
ಬದುಕು ಭವ ಗೆದ್ದವ
ಅಮರ ಸಂಜೀವಿನಿಯಾದೆ
ಸದಾ ಸ್ನೇಹದ ಸಾಕಾರದಲಿ

ಉದಯಿಸುವ ರವಿಯಾಗಿ
ಬಾಳಿದ ಕೊನೆಗಳಿಗೆ ತನಕ
ಕತ್ತಲೆದೂಡುತ ಬೆಳಗುತಲೆ
ಮರಳದ ನಾಡಿಗೆ ನಡೆದೆ

ಸುಳಿದಾಡುತ ನೆನಪು
ಅಗಲಿಕೆಯ ನೋವಲಿ
ಅಂತರಾಳದ ಆತ್ಮೀಯತೆಗೆ
ಇರಿಯುತ ಕೆದುಕುತಿಹದು

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಡೆನುಡಿಯಿಂದ ನಾವು ನಡೆಯಬೇಕಣ್ಣಾ
Next post ಲಂಚದ ಮನೆ

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

cheap jordans|wholesale air max|wholesale jordans|wholesale jewelry|wholesale jerseys