ಸಾಮ್ರಾಜ್ಞಿ

ತುಂಬಿದ ಸಿರಿಯ ಸೊಬಗಿನಲಿ
ಗಿರಿವನ ಬೆಟ್ಟಗಳ ಹಸಿರಲಿ
ಕನ್ನಡದ ಗಡಿಯಲಿ
ಕನ್ನಡಮ್ಮನ ಅಳಲು ಆಲಿಸುವವರಿಲ್ಲ

ಮೆರೆಯಬೇಕಿದ್ದ ಸಾಮ್ರಾಜ್ಞಿ
ಬೆಂಡಾಗುತಿಹಳು ಬವಣೆಯಿಂದ
ಜೋಭದ್ರ ನಾಯಕಮಣಿಗಳನು
ಪಡೆದ ಕನ್ನಡನಾಡಿನ ಚಿತ್ರವ ಕಂಡು
ಕಣ್ಣೀರಿನ ಹೊಳೆ ಹರಿಸುತಿಹಳು

ಕಣ್ಣು ತೆರೆಯಿರಿ ಕನ್ನಡ ಕುವರರೆ
ಅಳಿಯುತಿಹ ಕನ್ನಡ ಉಳಿಸಿರಿ
ಪರಭಾಷೆಯ ದಳ್ಳುರಿಯ ಶಮನಗೊಳಿಸಲು
ಕಂಕಣಕಟ್ಟಿ ಸನ್ನದ್ಧರಾಗಿರಿ

ವೀರಾವೇಷದಿ ಬರಿ ಘೋಷಣೆ ಕೂಗುತಾ
ನಾಯಕರ ಪೊಳ್ಳು ಭಾಷಣ ಕೇಳುತಾ
ಮನನೊಂದು ಮಮ್ಮಲ ಮರಗುತಿಹಳು…

ಗಡಿ ನಾಡಿನ ಉದ್ದಕ್ಕೂ
ಝೇಂಕರಿಸುತಿಹುದು ಶೋಕಗೀತೆ
ವೇದನೆಯ ಶಮನಗೊಳಿಸುವಿರಾ
ತಾಯಿ ಎದುರನೋಡುತಿಹಳು
ಕನ್ನಡ ಕುವರರ ಶಕ್ತಿ-ಯುಕ್ತಿಗಳನು

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೃಷಿ
Next post ಕರುನಾಡು

ಸಣ್ಣ ಕತೆ

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

cheap jordans|wholesale air max|wholesale jordans|wholesale jewelry|wholesale jerseys