ಸಾಮ್ರಾಜ್ಞಿ

ತುಂಬಿದ ಸಿರಿಯ ಸೊಬಗಿನಲಿ
ಗಿರಿವನ ಬೆಟ್ಟಗಳ ಹಸಿರಲಿ
ಕನ್ನಡದ ಗಡಿಯಲಿ
ಕನ್ನಡಮ್ಮನ ಅಳಲು ಆಲಿಸುವವರಿಲ್ಲ

ಮೆರೆಯಬೇಕಿದ್ದ ಸಾಮ್ರಾಜ್ಞಿ
ಬೆಂಡಾಗುತಿಹಳು ಬವಣೆಯಿಂದ
ಜೋಭದ್ರ ನಾಯಕಮಣಿಗಳನು
ಪಡೆದ ಕನ್ನಡನಾಡಿನ ಚಿತ್ರವ ಕಂಡು
ಕಣ್ಣೀರಿನ ಹೊಳೆ ಹರಿಸುತಿಹಳು

ಕಣ್ಣು ತೆರೆಯಿರಿ ಕನ್ನಡ ಕುವರರೆ
ಅಳಿಯುತಿಹ ಕನ್ನಡ ಉಳಿಸಿರಿ
ಪರಭಾಷೆಯ ದಳ್ಳುರಿಯ ಶಮನಗೊಳಿಸಲು
ಕಂಕಣಕಟ್ಟಿ ಸನ್ನದ್ಧರಾಗಿರಿ

ವೀರಾವೇಷದಿ ಬರಿ ಘೋಷಣೆ ಕೂಗುತಾ
ನಾಯಕರ ಪೊಳ್ಳು ಭಾಷಣ ಕೇಳುತಾ
ಮನನೊಂದು ಮಮ್ಮಲ ಮರಗುತಿಹಳು…

ಗಡಿ ನಾಡಿನ ಉದ್ದಕ್ಕೂ
ಝೇಂಕರಿಸುತಿಹುದು ಶೋಕಗೀತೆ
ವೇದನೆಯ ಶಮನಗೊಳಿಸುವಿರಾ
ತಾಯಿ ಎದುರನೋಡುತಿಹಳು
ಕನ್ನಡ ಕುವರರ ಶಕ್ತಿ-ಯುಕ್ತಿಗಳನು

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೃಷಿ
Next post ಕರುನಾಡು

ಸಣ್ಣ ಕತೆ

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…