ನೊಯ್ಯದಿರು ಮನವೇ

ನೊಯ್ಯದಿರು ಮನವೇ
ಯಾರೇ ತುಚ್ಯವಾಗಿ ಕಂಡರೂ|
ತಳಮಳಿಸದಿರು ಜೀವವೇ
ವಿಪರೀತ ಪೃಚ್ಚರ ಮಾತಿಗೆ||

ಅವಮಾನ ಮಾಡಲೆಂದೇ
ಕಾಯುವವರು ಕೆಲವರು|
ತಲ್ಲಣಿಸದಿರು ಜೀವವೇ
ಕಾಲವೇ ಉತ್ತರಿಸುವುದು ಮೆಲ್ಲಗೆ||

ನಿನ್ನ ಒಳಮನಸನೊಮ್ಮೆ ಕೇಳು
ಇದು ನಿನಗೆ ಸರಿಯೇ ಎಂದು|
ಸರಿಯಿಲ್ಲವೆಂದರೆ ಕ್ಷಮೆಯಾಚಿಸು
ತಿದ್ದಿ ಸರಿಪಡಿಸಿಕೊ ಇಂದೇ
ಮುಂದೆ ಮರುಕಳಿಸಬಾರದೆಂದು||

ತಾಳಿದವರು ಬಾಳಿಯಾರು
ಎಂಬ ಗಾದೆ ಮಾತಿನಂತೆ
ಸಹಿಸಿಕೋ ಎಲ್ಲವನೂ|
ಕಾಲ ಬರುವುದು ನಿನಗೆ,
ಅವರಂತೆ ನೀನೂ ನಡೆದರೆ
ವ್ಯತ್ಯಾಸವೇನಿಬ್ಬರಿಗೆ||

ಶಿಲ್ಪಿ ಉಳಿಯಿಂದ ಕಡೆದಷ್ಟು
ಬಲು ಸುಂದರ ಮೂರ್ತಿಯಾಗಿ
ಪೂಜೆಗೆ ರೂಪಗೂಳ್ಳುವೆ|
ಎಲ್ಲರಿಂದ ಗೌರವ ಸ್ವೀಕರಿಸುವೆ
ಸಹಿಸಿಕೊ ಜೀವವೇ ನೀ ಅಲ್ಲಿಯವರೆಗೆ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಟೂ ಬಿಡಲು ಕಾರಣ
Next post ಕಣ್ಣು ಮುಚ್ಚಾಲೆ

ಸಣ್ಣ ಕತೆ

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…