ಇಷ್ಟವಿಲ್ಲದಿದ್ದರುನೂ

ಇಷ್ಟವಿಲ್ಲದಿದ್ದರುನೂ
ನಮ್ಮ ಮಕ್ಕಳನ್ನು
ಇಂಗ್ಲೀಷ್ ಶಾಲೆಗಳಿಗೆ
ಸೇರಿಸುತ್ತಿದ್ದೇವೆ |
ಹೆಂಡತಿಯ ಒತ್ತಾಯಕ್ಕೋ,
ನೆರೆಮನೆಯವರ ಅಹಿತಕರ
ಜೀವನ ಸ್ಪರ್ಧೆಗೋ ಅಥವಾ ನಾವು
ಹೆಚ್ಚೆಂದು ತೊರಿಸಿಕೊಳ್ಳಲೋ||

ವಾಸ್ತವದಲಿ ಕಠಿಣವೆನಿಸಿದರೂ
ಕೈಯಲ್ಲಿ ಕಾಸಿಲ್ಲದಿದ್ದರೂ
ಹೇಗೋ ಹೆಣಗಾಡಿ ಜೀವತೇಯ್ದು
ಮಕ್ಕಳಿಗೆ ಶಿಕ್ಷಣಕೊಡಿಸಲು
ಇಡೀ ಜೀವಮಾನ ಮುಡಿಪಾಗಿಡುತ್ತೇವೆ|
ಇನ್ನು ಇದೆಲ್ಲದರ ಜೊತೆಗೆ
ವಸತಿಯುಕ್ತ ಅಂತರಾಷ್ಟ್ರೀಯ ಶಾಲೆಯ
ಅಂಧ ವ್ಯಾಮೋಹ
ಅಲ್ಲಿಗೆ ಸೇರಿಸಲು ದುಂಬಾಲು|
ಇದರ ಪರಿಣಾಮ ಮಕ್ಕಳಿಗೆ ಪೋಷಕರ
ಪ್ರೀತಿ ವಾತ್ಸಲ್ಯ ಕೊರತೆ, ಒಂಟಿತನ||

ವಿದ್ಯೆಯ ಮೂಲ ಉದ್ದೇಶವಾದರೂ ಏನು?
ಜ್ಞಾನ, ವಿಜ್ಞಾನ, ಸುಶಿಕ್ಷಣ,
ಸಂಸ್ಕಾರ, ಇತಿಹಾಸ ಹಾಗೂ
ನಮ್ಮ ದೇಶ ಭಾಷೆಯ ಶ್ರೀಮಂತಿಕೆ ಅಧ್ಯಯನ|
ಆದರೆ ಅದು ಆಗುತ್ತಿದೆಯೇ?
ಆದರೂನು ಅದು ಅನ್ಯ ಭಾಷೆಯಲ್ಲಿ
ಕಲಿಸಿದರೆ ಅದೆಷ್ಟು ಪರಿಪೂರ್ಣ?
ಇದನ್ನೇ ಮಾತೃ ಭಾಷೆಯಲ್ಲಿ ಸುಲಲಿತವಾಗಿ
ಮಕ್ಕಳಿಗೆ ಹೊರೆಯಾಗದಂತೆ|
ಕಡಿಮೆ ಕರ್ಚಿನಲ್ಲಿ ಎಲ್ಲರಿಗೂ
ಕೈಗೆಟುಕುವ ಬೆಲೆಯಲ್ಲಿ
ಮಾಡಿದರೆಷ್ಟು ಚೆನ್ನ|
ಇದಲ್ಲವೇ ಕನ್ನಡ ಉಳಿಸಿ ಬೆಳೆಸಿ
ಶ್ರೀಮಂತಗೊಳಿಸುವ ಮಾರ್ಗ||

ಅಂತಿಮವಾಗಿ ಹೊಟ್ಟೆಹೊರೆಯಲು
ಎಷ್ಟು ವಿದ್ಯೆ ಬೇಕು? ಪ್ರಪಂಚದ ಎಲ್ಲಾ
ವಿದ್ಯೆಯನ್ನು ಒಬ್ಬರೇ ಕಲಿತು,
ಒಬ್ಬನೇ ಎಲ್ಲಾ ಕೆಲಸ ನಿರ್ವಹಿಸಲು ಸಾಧ್ಯವೇ?|
ಎಲ್ಲರು ಅವರವರ ಯೋಗ್ಯತಾನುಸಾರ
ಕೈಲಾಗುವದನ್ನು ಮಾಡಿದರೆ
ಲೋಕಕಲ್ಯಾಣ ಸಾಧ್ಯ|
ರಾಷ್ಟ್ರಮಟ್ಟದಲಿ ಅತೀ ಹೆಚ್ಚು
ಹೆಸರು ಮಾಡಿರುವವರೆಲ್ಲರೂ
ಮಾತೃ ಭಾಷೆಯಲ್ಲಿ ಹಾಗೂ
ಸರ್ಕಾರಿ ಶಾಲೆಯಲ್ಲಿ ಕಲಿತವರೇ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೋಳಿ ಕಣ್ಣೀರು
Next post ಅವತಾರಿ

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…