ನೀನಿರುವೆ ಎಲ್ಲೋ

ನೀನಿರುವೆ ಎಲ್ಲೋ|
ಸುಂದರ ಶಿಲ್ಪಕಲೆಯ ಗುಡಿಯಲೋ
ಈ ವನರಾಶಿ ಪ್ರಕೃತಿಯ ಮಡಿಲಲೋ|
ಶ್ರೀಮಂತರ ಸುಪ್ಪತ್ತಿಗೆಯಲೋ
ಬಟ್ಟೆ ಪೀತಾಂಬರವಿರದ
ಹರಕು ಬಟ್ಟೆಯನುಟ್ಟ
ಮುರುಕು ಮನೆಯ ತಿರುಕನಲೋ||

ಜಗಜಗಿಸುವ ವಜ್ರಖಚಿತ ಮುತ್ತುರತ್ನ
ಮುಕುಟ ಧರಿಸಿದವನಾಗಿಯೋ
ಮಣಿ ಕಂಠಮಾಲ ಚಿನ್ನದ
ಪಾದುಕೆ, ಬೆತ್ತದಾರಿಣಿಯಾಗಿಯೋ|
ಕೌಪೀನದಾರಿ, ತುಳಸೀಮಾಲಾ, ಶ್ರೀಗಂಧ
ಚೆಂದನ ಲೇಪಿತ ವಟು ಬ್ರಾಹ್ಮಣನಲ್ಲಿಯೋ||

ಲೋಕದ ಹಸಿವನೀಗಿಸೆ
ದುಡಿವ ರೈತನ ಬೆವರಹನಿಯಲ್ಲಿಯೋ|
ಚೆಂದದಾಕಳ ಕರುವ ಜಿಂಕೆಯ
ಕಣ್ಣೆಸಳ ಕಾಂತಿಯಲ್ಲಿಯೋ|
ಹೆತ್ತಮಗುವಿಗಾಗಿ ಜೀವನ ತೇಯ್ದು
ಪ್ರೀತಿಯ ಸುರಿಸುವ ತಾಯಿ ಮಮತೆಯಲ್ಲಿಯೋ|
ಕತ್ತಲೆ ತೊಳೆದು ಅಜ್ಞಾನವ
ಹೊಡೆದೋಡಿಸುವ ಜ್ಞಾನ ಜ್ಯೋತಿಯಲ್ಲಿಯೋ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹನಿ ಕತೆ
Next post ದೇಹ ಆತ್ಮ ಭಾವ

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…