ನೀನಿರುವೆ ಎಲ್ಲೋ

ನೀನಿರುವೆ ಎಲ್ಲೋ|
ಸುಂದರ ಶಿಲ್ಪಕಲೆಯ ಗುಡಿಯಲೋ
ಈ ವನರಾಶಿ ಪ್ರಕೃತಿಯ ಮಡಿಲಲೋ|
ಶ್ರೀಮಂತರ ಸುಪ್ಪತ್ತಿಗೆಯಲೋ
ಬಟ್ಟೆ ಪೀತಾಂಬರವಿರದ
ಹರಕು ಬಟ್ಟೆಯನುಟ್ಟ
ಮುರುಕು ಮನೆಯ ತಿರುಕನಲೋ||

ಜಗಜಗಿಸುವ ವಜ್ರಖಚಿತ ಮುತ್ತುರತ್ನ
ಮುಕುಟ ಧರಿಸಿದವನಾಗಿಯೋ
ಮಣಿ ಕಂಠಮಾಲ ಚಿನ್ನದ
ಪಾದುಕೆ, ಬೆತ್ತದಾರಿಣಿಯಾಗಿಯೋ|
ಕೌಪೀನದಾರಿ, ತುಳಸೀಮಾಲಾ, ಶ್ರೀಗಂಧ
ಚೆಂದನ ಲೇಪಿತ ವಟು ಬ್ರಾಹ್ಮಣನಲ್ಲಿಯೋ||

ಲೋಕದ ಹಸಿವನೀಗಿಸೆ
ದುಡಿವ ರೈತನ ಬೆವರಹನಿಯಲ್ಲಿಯೋ|
ಚೆಂದದಾಕಳ ಕರುವ ಜಿಂಕೆಯ
ಕಣ್ಣೆಸಳ ಕಾಂತಿಯಲ್ಲಿಯೋ|
ಹೆತ್ತಮಗುವಿಗಾಗಿ ಜೀವನ ತೇಯ್ದು
ಪ್ರೀತಿಯ ಸುರಿಸುವ ತಾಯಿ ಮಮತೆಯಲ್ಲಿಯೋ|
ಕತ್ತಲೆ ತೊಳೆದು ಅಜ್ಞಾನವ
ಹೊಡೆದೋಡಿಸುವ ಜ್ಞಾನ ಜ್ಯೋತಿಯಲ್ಲಿಯೋ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹನಿ ಕತೆ
Next post ದೇಹ ಆತ್ಮ ಭಾವ

ಸಣ್ಣ ಕತೆ

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…