ನೀನಿರುವೆ ಎಲ್ಲೋ

ನೀನಿರುವೆ ಎಲ್ಲೋ|
ಸುಂದರ ಶಿಲ್ಪಕಲೆಯ ಗುಡಿಯಲೋ
ಈ ವನರಾಶಿ ಪ್ರಕೃತಿಯ ಮಡಿಲಲೋ|
ಶ್ರೀಮಂತರ ಸುಪ್ಪತ್ತಿಗೆಯಲೋ
ಬಟ್ಟೆ ಪೀತಾಂಬರವಿರದ
ಹರಕು ಬಟ್ಟೆಯನುಟ್ಟ
ಮುರುಕು ಮನೆಯ ತಿರುಕನಲೋ||

ಜಗಜಗಿಸುವ ವಜ್ರಖಚಿತ ಮುತ್ತುರತ್ನ
ಮುಕುಟ ಧರಿಸಿದವನಾಗಿಯೋ
ಮಣಿ ಕಂಠಮಾಲ ಚಿನ್ನದ
ಪಾದುಕೆ, ಬೆತ್ತದಾರಿಣಿಯಾಗಿಯೋ|
ಕೌಪೀನದಾರಿ, ತುಳಸೀಮಾಲಾ, ಶ್ರೀಗಂಧ
ಚೆಂದನ ಲೇಪಿತ ವಟು ಬ್ರಾಹ್ಮಣನಲ್ಲಿಯೋ||

ಲೋಕದ ಹಸಿವನೀಗಿಸೆ
ದುಡಿವ ರೈತನ ಬೆವರಹನಿಯಲ್ಲಿಯೋ|
ಚೆಂದದಾಕಳ ಕರುವ ಜಿಂಕೆಯ
ಕಣ್ಣೆಸಳ ಕಾಂತಿಯಲ್ಲಿಯೋ|
ಹೆತ್ತಮಗುವಿಗಾಗಿ ಜೀವನ ತೇಯ್ದು
ಪ್ರೀತಿಯ ಸುರಿಸುವ ತಾಯಿ ಮಮತೆಯಲ್ಲಿಯೋ|
ಕತ್ತಲೆ ತೊಳೆದು ಅಜ್ಞಾನವ
ಹೊಡೆದೋಡಿಸುವ ಜ್ಞಾನ ಜ್ಯೋತಿಯಲ್ಲಿಯೋ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹನಿ ಕತೆ
Next post ದೇಹ ಆತ್ಮ ಭಾವ

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

cheap jordans|wholesale air max|wholesale jordans|wholesale jewelry|wholesale jerseys