ನಿಸರ್ಗ ಸ್ವರ್ಗ

ಹಚ್ಚ ಹಸಿರಿನ ಉಡುಪುಟ್ಟ
ನಮ್ಮಯ ಕಾನನ ಧಾಮ
ಸ್ವರ್ಗ ಸಮಾನ ನಿಸರ್ಗ
ಸದಾ ಸಂತಸ ಚೆಲ್ಲುವ
ಜೀವನದುಸಿರಿನ ತಾಣ

ತುಂಬಿಹ ಹಕ್ಕಿಗಳ ಚಿಲಿಪಿಲಿಗಾನ
ಧರೆಯ ಚುಂಬನಗೈಯುತ
ತರು-ಲತೆಗಳ ಸಿಂಚನಗೈಯುತ
ಧಾವಿಸಿ ಹರಿಯುತಿಹದು

ಜಲಧಾರೆಯ ಜುಳು… ಜುಳು… ಗಾನ
ಭ್ರಮರಗಿಡ-ಮರಗಳ ಝೇಂಕಾರ
ಸುಮಧುರ ಸುಮಗಳ ನಾದ
ಸಂತಸಗೊಳಿಸುತ ಸೆಳೆಯುತಲಿ
ತನು-ಮನ ಉಲ್ಲಾಸದಿ ಕುಣಿಯುತಿಹದು

ಅನುಪಮ… ಆನಂದಮಯ
ರಮ್ಯ-ಸೌಂದರ್ಯದ ನೋಟ
ಚೆಲ್ಲಿಹಳು ಮಡಿಲೆಲ್ಲಾ ಮೈಮಾಟ
ಭೂಸಿರಿಗೆ ಹೊಚ್ಚಿಹಳು ಹೊದಿಕೆಯನು
ವಿರಾಜಿಸಿ… ವಿರಮಿಸಿಹಳು ತಾಯಿ…
ಕೈ ಮಾಡಿ ಕರೆಯುತಿಹಳು
ಪ್ರೀತಿ ಪ್ರೇಮದ ಧಾರೆ ಸುರಿಸುತಿಹಳು

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೆಂಪು ದೀಪದ ಕೆಳಗೆ
Next post ನಗೆ ಡಂಗುರ – ೧೪

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

cheap jordans|wholesale air max|wholesale jordans|wholesale jewelry|wholesale jerseys