ನೀ ನುಡಿದರೆ….

ನೀ ನುಡಿದರೆ
ಕೋಗಿಲೆ ಹಾಡುವುದಿಲ್ಲ
ನೀ ನಡೆದರೆ
ನವಿಲು ಕುಣಿಯುವುದಿಲ್ಲ
ತೆರೆದರೆ ನೀನು ಕಣ್ಣು
ತಾರೆ ಹೊಳೆಯುವುದಿಲ್ಲ
ಮರೆತರೆ ನೀನು ನನ್ನ
ಕವಿತೆ ಮೂಡುವುದಿಲ್ಲ //ಪ//

ತಾವರೆಗೆ ನೀ ತೋರಿದೆ
ಅರಳಬೇಕು ಹೇಗೆಂದು
ಮಲ್ಲಿಗೆಗೆ ನೀ ಪಿಸುನುಡಿದೆ
ಘಮಘಮಿಸಬೇಕು ಹೇಗೆಂದು
ಕಾವೇರಿಗೆ ನೀ ಸಾರಿದೆ
ಹರಿಯಬೇಕು ಹೇಗೆಂದು
ನನಗೆ ಮಾತ್ರ ನೀ ಹೇಳಿದೆ
ಬರೆಯಬೇಕು ಹೇಗೆಂದು

ಸೆಳೆದೆ ಏಕೆ ನೀ ನನ್ನ
ಏನೂ ತಿಳಿಯದವ ನಾನು
ಹಾದಿ ತಪ್ಪುತಿರುವೆನೆ ಹೇಳು
ಏನೂ ಅರಿಯದವ ನಾನು
ಹಗಲಿರುಳು ಹೀಗೆ ಸೆಳೆದು
ಕಂಡದ್ದ ಕಾಣಿಸಿದೆ ನೀನು
ಪೂರ್ಣ ಕರುಣೆ ಸಿಗಬಹುದೇ ನನಗೆ
ಕಾಯಬೇಕಿದೆಯೆ ಇನ್ನು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೃಹವ್ಯವಸ್ಥೆ
Next post ಮಾದರಿ

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

cheap jordans|wholesale air max|wholesale jordans|wholesale jewelry|wholesale jerseys