ನನ್ನ ಮನಸು ನಿನ್ನಲ್ಲಿ

ನನ್ನ ಮನಸು ನಿನ್ನಲ್ಲಿ
ನಿನ್ನ ಮನಸು ನನ್ನಲ್ಲಿ
ನಡುವೆ ಯಾವುದೀ ಅಂತರ . . .
ಆಗಬಹುದೆ ಹೃದಯ ಹಗುರ? /ಪ//

ಹರಿಯುತಿದೆ ತುಂಬಿ ಹೊಳೆ
ಜೊತೆಗೆ ಮುಂಗಾರು ಮಳೆ
ತಳ ಒಡೆದ ದೋಣಿ ದಡದಲಿ . . .
ತಾರೆ ಬೆಳಕು ಸಹ ಇಲ್ಲ ನಭದಲಿ !

ಮೊರೆಯುತಿದೆ ಸಪ್ತ ಸಮುದ್ರ
ದಿಕ್ಕು ದೆಸೆಗಳೆಲ್ಲವೂ ಛಿದ್ರ
ದಾರಿ ಮೂಡಬಹುದೇ ಇಲ್ಲಿ? . . .
ನನ್ನ ನಿನ್ನ ಸಂಗಮದ ದಿಕ್ಕಲಿ

ನನ್ನ ನಿನ್ನ ನಡುವೆ ಬೇಲಿ
ಹೇಗೊ ಏನೊ ಬೆಳೆದಿಹುದಿಲ್ಲಿ
ಹೇಳು ಇದಕೇನು ಕಾರಣ? . . .
ಆಗಬಹುದೆ ಬದುಕು ಶ್ರಾವಣ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೊಡ್ಡವರ ವಜ್ರ
Next post ಸೋಲು

ಸಣ್ಣ ಕತೆ

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

cheap jordans|wholesale air max|wholesale jordans|wholesale jewelry|wholesale jerseys