ಹೋಗಲಾರೆ ನಾ ದೇಗುಲಕೆ

ಹೋಗಲಾರೆ ನಾ ದೇಗುಲಕೆ
ಹೃದಯವೆ ದೇಗುಲವಿಲ್ಲಿ
ದೇವರು ಒಬ್ಬರೂ ಇಲ್ಲಿಲ್ಲ
ದೇವತೆ ಮಾತ್ರವೆ ಇಹಳಿಲ್ಲಿ \\ಪ\\

ಎತ್ತಿರುವೆ ನಾ ಆರತಿಯ
ಕಂಗಳಲಿ ಜೋತಿಯ ಉರಿಸಿ
ಪಠಿಸುತ್ತಿರುವೆ ಮಂತ್ರವನು
ಪ್ರಣಯದಾಟದಿ ತುಟಿ ಮಿಡಿಸಿ
ಪ್ರಸನ್ನವಾಗಿದೆ ಮುಖಾರವಿಂದ
ಇದಕಿಂತ ವರ ಯಾವುದು ಚೆಂದ?

ಹೊರಟರೆ ದೇವಿ ಮೆರವಣಿಗೆ
ಹೃದಯವೆ ಬೀದಿ ಆಗುವುದು
ತೆರೆದರೆ ಕಣ್ಣು ಕರುಣೆಯಲಿ
ಬದುಕಲಿ ಸುಗ್ಗಿ ಮೂಡುವುದು
ನನಗಿರುವುದು ದೇವತೆ ಮಾತ್ರ
ದೇವಿಗೆ ಭಕ್ತ ನಾ ಮಾತ್ರ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತ್ರಿಪಾದ
Next post ಕಸಿ

ಸಣ್ಣ ಕತೆ

  • ಕನಸು ದಿಟವಾಯಿತು

    ಪ್ರಕರಣ ೨ ಸೂರ್ಯೋದಯವಾಯಿತು. ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಕಾಫಿ ಸೇವನೆಯನ್ನು ಮಾಡುತ್ತಾ ರಂಗಣ್ಣನು ಹೆಂಡತಿಗೆ ಕನಸಿನ ಸಮಾಚಾರವನ್ನು ತಿಳಿಸಿದನು. ಆಕೆ- ಸರಿ, ಇನ್ನು ಈ ಹುಚ್ಚೊಂದು ನಿಮಗೆ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…