ಸಾಗಿದ ದಾರಿ

ಹುಟ್ಟಿದ ಊರು ತೊರೆದು
ಸಾಗಿಹೆನು ದೂರದ ನಾಡಿಗೆ..
ಕಾಡಿನ ಮಡಿಲ ಮಧ್ಯದಿ…
ಬೆರೆತು-ಬಾಳಬೇಕಾಗಿದೆ

ತಂದೆ-ತಾಯಿ-ಬಳಗ
ಪ್ರೀತಿ-ಸೆಲೆಯ-ನೆಲೆಯ
ಒಡನಾಡಿ… ಬಂಧುಗಳೆಲ್ಲಾ
ತೊರೆದು ದೂರ ಬಂದಿಹೆನು
ನೋವಲಿ ಮನ ಕುದಿಯುತಿಹದು

ಹೊಸತನದ ಹರುಷ
ಕಳೆದ ಬಾಲ್ಯದ ನೆನಪು
ಜೀವನದಾಟದ ಗೆಲುವು ಈ ಕಡೆ
ಬದುಕಿನ ನಲಿವು ಆ ಕಡೆ

ನೆಲ-ಭಾಷೆಗಳ ಹೊಸತನದ
ಏಕಾಂತದ-ಬಲೆಯಲಿ
ಹೃದಯದಾಳದಿ ಮೀಟುವ
ನೆನಪಿನಲೆಯು ನೋವಾಗಿ
ತನು-ಮನ ಮಂಕಾಗಿಸುತಿಹದು

ಬದುಕಿನ ದೂರದಲ್ಲೊಂದು
ಮಿನುಗುತಿಹದು ಆಶಾಕಿರಣ
ಎಚ್ಚರಿಸುತಿಹದು ಇದು ಮಂಕಲ್ಲ
ಜೀವನದ ಗೆಲುವು ಎಂದು

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೧೫
Next post ನಗೆ ಡಂಗುರ – ೧೬

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…