ಸಾಗಿದ ದಾರಿ

ಹುಟ್ಟಿದ ಊರು ತೊರೆದು
ಸಾಗಿಹೆನು ದೂರದ ನಾಡಿಗೆ..
ಕಾಡಿನ ಮಡಿಲ ಮಧ್ಯದಿ…
ಬೆರೆತು-ಬಾಳಬೇಕಾಗಿದೆ

ತಂದೆ-ತಾಯಿ-ಬಳಗ
ಪ್ರೀತಿ-ಸೆಲೆಯ-ನೆಲೆಯ
ಒಡನಾಡಿ… ಬಂಧುಗಳೆಲ್ಲಾ
ತೊರೆದು ದೂರ ಬಂದಿಹೆನು
ನೋವಲಿ ಮನ ಕುದಿಯುತಿಹದು

ಹೊಸತನದ ಹರುಷ
ಕಳೆದ ಬಾಲ್ಯದ ನೆನಪು
ಜೀವನದಾಟದ ಗೆಲುವು ಈ ಕಡೆ
ಬದುಕಿನ ನಲಿವು ಆ ಕಡೆ

ನೆಲ-ಭಾಷೆಗಳ ಹೊಸತನದ
ಏಕಾಂತದ-ಬಲೆಯಲಿ
ಹೃದಯದಾಳದಿ ಮೀಟುವ
ನೆನಪಿನಲೆಯು ನೋವಾಗಿ
ತನು-ಮನ ಮಂಕಾಗಿಸುತಿಹದು

ಬದುಕಿನ ದೂರದಲ್ಲೊಂದು
ಮಿನುಗುತಿಹದು ಆಶಾಕಿರಣ
ಎಚ್ಚರಿಸುತಿಹದು ಇದು ಮಂಕಲ್ಲ
ಜೀವನದ ಗೆಲುವು ಎಂದು

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೧೫
Next post ನಗೆ ಡಂಗುರ – ೧೬

ಸಣ್ಣ ಕತೆ

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

cheap jordans|wholesale air max|wholesale jordans|wholesale jewelry|wholesale jerseys