ಉದಯಾಚಲದಲಿ ಮೂಡಿದ ಸೂರ್ಯ

ಉದಯಾಚಲದಲಿ ಮೂಡಿದ ಸೂರ್ಯ
ಹಿಡಿದನು ಕನ್ನಡ ಬಾವುಟವ
ಹಾರಿದ ಹಕ್ಕಿಗಳೆಲ್ಲವು ಮೊರೆದವು
ಕನ್ನಡ ನಾಡ ಗೀತವ ||

ಓಡುವ ನದಿಗಳು ಕಲಕಲ ರವದಲಿ
ನಲಿಸಲಿ ಕರುನಾಡ
ಹೆಜ್ಜೆಯ ಹಾಕಿದ ಪಚ್ಚನೆ ಪಯಿರು
ಮೆರೆಸಲಿ ಸಿರಿನಾಡ
ಪಡುವಣ ತೀರದ ಸಹ್ಯಾದ್ರಿಯ ಸಿರಿ
ಸ್ಫೂರ್ತಿಯ ಸೆಲೆಯಾಗಿ
ಉಳಿಸಲಿ ಬೆಳೆಸಲಿ ಕನ್ನಡ ಸತ್ವವ
ಚಿರನೂತನವಾಗಿ

ಸುರಿಯಲಿ ಎಲ್ಲೂ ಕನ್ನಡದಾ ಮಳೆ
ಸ್ವಾತಿಯ ಮುತ್ತಾಗಿ
ತೊನೆಯಲಿ ಎಲ್ಲೆಡೆ ಭ್ರಾತೃತ್ವದ ಬೆಳೆ
ಉಸಿರು ಉಸಿರಾಗಿ
ಮೊಳಗಲಿ ಎಲ್ಲೆಡೆ ಕನ್ನಡ ಸ್ವರಗಳು
ಸರಿಗಮ ಪದವಾಗಿ
ಬೆಳೆಯಲಿ ಸರ್ವರ ಹೃದಯ ತೋಟದಲಿ
ತರು ಲತೆ ಒಂದಾಗಿ

ಏರಲಿ ಮುಗಿಲಿಂದಾಚೆಗೆ ಹಾರಲಿ
ಕನ್ನಡ ಬಾವುಟವು
ಸೂರ್ಯನ ಮೀರಿದ ಗ್ರಹತಾರೆಗಳು
ಸೂಸಲಿ ಸ್ವಾಗತವು
ಕನ್ನಡ ಕನ್ನಡ ಐಸಿರಿಗನ್ನಡ
ಎಂದೂ ಚೇತನವು
ಕನ್ನಡ ನುಡಿಯಲಿ ತೇಲಿದ ಜೀವಿಯ
ಬದುಕು ಪಾವನವು

ಕಸ್ತೂರಿಯಲಿ ಮೈತಳೆದ ಸಿರಿ
ನಮ್ಮೀ ಕನ್ನಡವು
ಬಿಟ್ಟರೆ ಬಾಯಿ ಕವಿತೆಯು ಅಲ್ಲಿ
ಎಂಥಾ ಸೋಜಿಗವು
ಸುಂದರ ಕನ್ನಡ ನಾಡನು ಹೊತ್ತ
ಭೂಮಿ ಸಾರ್ಥಕವು
ಇಂತಹ ನಾಡನು ನೋಡದ ಮಂದಿಯ
ಜನ್ಮ ನಿರರ್ಥಕವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೋತಿಷ್ಯ
Next post ಹಸಿವು ೨

ಸಣ್ಣ ಕತೆ

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

cheap jordans|wholesale air max|wholesale jordans|wholesale jewelry|wholesale jerseys