ಉದಯಾಚಲದಲಿ ಮೂಡಿದ ಸೂರ್ಯ

ಉದಯಾಚಲದಲಿ ಮೂಡಿದ ಸೂರ್ಯ
ಹಿಡಿದನು ಕನ್ನಡ ಬಾವುಟವ
ಹಾರಿದ ಹಕ್ಕಿಗಳೆಲ್ಲವು ಮೊರೆದವು
ಕನ್ನಡ ನಾಡ ಗೀತವ ||

ಓಡುವ ನದಿಗಳು ಕಲಕಲ ರವದಲಿ
ನಲಿಸಲಿ ಕರುನಾಡ
ಹೆಜ್ಜೆಯ ಹಾಕಿದ ಪಚ್ಚನೆ ಪಯಿರು
ಮೆರೆಸಲಿ ಸಿರಿನಾಡ
ಪಡುವಣ ತೀರದ ಸಹ್ಯಾದ್ರಿಯ ಸಿರಿ
ಸ್ಫೂರ್ತಿಯ ಸೆಲೆಯಾಗಿ
ಉಳಿಸಲಿ ಬೆಳೆಸಲಿ ಕನ್ನಡ ಸತ್ವವ
ಚಿರನೂತನವಾಗಿ

ಸುರಿಯಲಿ ಎಲ್ಲೂ ಕನ್ನಡದಾ ಮಳೆ
ಸ್ವಾತಿಯ ಮುತ್ತಾಗಿ
ತೊನೆಯಲಿ ಎಲ್ಲೆಡೆ ಭ್ರಾತೃತ್ವದ ಬೆಳೆ
ಉಸಿರು ಉಸಿರಾಗಿ
ಮೊಳಗಲಿ ಎಲ್ಲೆಡೆ ಕನ್ನಡ ಸ್ವರಗಳು
ಸರಿಗಮ ಪದವಾಗಿ
ಬೆಳೆಯಲಿ ಸರ್ವರ ಹೃದಯ ತೋಟದಲಿ
ತರು ಲತೆ ಒಂದಾಗಿ

ಏರಲಿ ಮುಗಿಲಿಂದಾಚೆಗೆ ಹಾರಲಿ
ಕನ್ನಡ ಬಾವುಟವು
ಸೂರ್ಯನ ಮೀರಿದ ಗ್ರಹತಾರೆಗಳು
ಸೂಸಲಿ ಸ್ವಾಗತವು
ಕನ್ನಡ ಕನ್ನಡ ಐಸಿರಿಗನ್ನಡ
ಎಂದೂ ಚೇತನವು
ಕನ್ನಡ ನುಡಿಯಲಿ ತೇಲಿದ ಜೀವಿಯ
ಬದುಕು ಪಾವನವು

ಕಸ್ತೂರಿಯಲಿ ಮೈತಳೆದ ಸಿರಿ
ನಮ್ಮೀ ಕನ್ನಡವು
ಬಿಟ್ಟರೆ ಬಾಯಿ ಕವಿತೆಯು ಅಲ್ಲಿ
ಎಂಥಾ ಸೋಜಿಗವು
ಸುಂದರ ಕನ್ನಡ ನಾಡನು ಹೊತ್ತ
ಭೂಮಿ ಸಾರ್ಥಕವು
ಇಂತಹ ನಾಡನು ನೋಡದ ಮಂದಿಯ
ಜನ್ಮ ನಿರರ್ಥಕವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೋತಿಷ್ಯ
Next post ಹಸಿವು ೨

ಸಣ್ಣ ಕತೆ

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…