Home / ಕವನ / ಭಾವಗೀತೆ / ಉದಯಾಚಲದಲಿ ಮೂಡಿದ ಸೂರ್ಯ

ಉದಯಾಚಲದಲಿ ಮೂಡಿದ ಸೂರ್ಯ

ಉದಯಾಚಲದಲಿ ಮೂಡಿದ ಸೂರ್ಯ
ಹಿಡಿದನು ಕನ್ನಡ ಬಾವುಟವ
ಹಾರಿದ ಹಕ್ಕಿಗಳೆಲ್ಲವು ಮೊರೆದವು
ಕನ್ನಡ ನಾಡ ಗೀತವ ||

ಓಡುವ ನದಿಗಳು ಕಲಕಲ ರವದಲಿ
ನಲಿಸಲಿ ಕರುನಾಡ
ಹೆಜ್ಜೆಯ ಹಾಕಿದ ಪಚ್ಚನೆ ಪಯಿರು
ಮೆರೆಸಲಿ ಸಿರಿನಾಡ
ಪಡುವಣ ತೀರದ ಸಹ್ಯಾದ್ರಿಯ ಸಿರಿ
ಸ್ಫೂರ್ತಿಯ ಸೆಲೆಯಾಗಿ
ಉಳಿಸಲಿ ಬೆಳೆಸಲಿ ಕನ್ನಡ ಸತ್ವವ
ಚಿರನೂತನವಾಗಿ

ಸುರಿಯಲಿ ಎಲ್ಲೂ ಕನ್ನಡದಾ ಮಳೆ
ಸ್ವಾತಿಯ ಮುತ್ತಾಗಿ
ತೊನೆಯಲಿ ಎಲ್ಲೆಡೆ ಭ್ರಾತೃತ್ವದ ಬೆಳೆ
ಉಸಿರು ಉಸಿರಾಗಿ
ಮೊಳಗಲಿ ಎಲ್ಲೆಡೆ ಕನ್ನಡ ಸ್ವರಗಳು
ಸರಿಗಮ ಪದವಾಗಿ
ಬೆಳೆಯಲಿ ಸರ್ವರ ಹೃದಯ ತೋಟದಲಿ
ತರು ಲತೆ ಒಂದಾಗಿ

ಏರಲಿ ಮುಗಿಲಿಂದಾಚೆಗೆ ಹಾರಲಿ
ಕನ್ನಡ ಬಾವುಟವು
ಸೂರ್ಯನ ಮೀರಿದ ಗ್ರಹತಾರೆಗಳು
ಸೂಸಲಿ ಸ್ವಾಗತವು
ಕನ್ನಡ ಕನ್ನಡ ಐಸಿರಿಗನ್ನಡ
ಎಂದೂ ಚೇತನವು
ಕನ್ನಡ ನುಡಿಯಲಿ ತೇಲಿದ ಜೀವಿಯ
ಬದುಕು ಪಾವನವು

ಕಸ್ತೂರಿಯಲಿ ಮೈತಳೆದ ಸಿರಿ
ನಮ್ಮೀ ಕನ್ನಡವು
ಬಿಟ್ಟರೆ ಬಾಯಿ ಕವಿತೆಯು ಅಲ್ಲಿ
ಎಂಥಾ ಸೋಜಿಗವು
ಸುಂದರ ಕನ್ನಡ ನಾಡನು ಹೊತ್ತ
ಭೂಮಿ ಸಾರ್ಥಕವು
ಇಂತಹ ನಾಡನು ನೋಡದ ಮಂದಿಯ
ಜನ್ಮ ನಿರರ್ಥಕವು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...