ಭೂಮಿಗಿಂತ ಹೃದಯ ಭಾರ

ಭೂಮಿಗಿಂತ ಹೃದಯ ಭಾರ
ಕಾಡಿಗಿಂತ ಹಾಡು ಘೋರ
ಏಕೆ ತಿಳಿಯದಾಗಿದೆ?
ಬೆಳದಿಂಗಳು ಸುಡುತಲಿಹುದು
ನೈದಿಲೆ ಹೂ ಬಾಡುತಿಹುದು
ಯಾರು ತಿಳಿಸಬೇಕಿದೆ?

ಘಮಘಮಿಸುವ ಮಲ್ಲೆ ತೋಟ
ಕಂಪಿನುಸಿರ ಬಿಸಿಯ ಸೂಸಿ
ಏಕೆ ವಿವಶವಾಗಿದೆ?
ಬೀಸಿ ಬಂದ ಯಾವ ಗಾಳಿ
ಸ್ಪರ್ಶಿಸಿ ಮರೆಯಾಯಿತೆಲ್ಲಿ
ಎಲ್ಲಿ ಹುಡುಕಬೇಕಿದೆ?

ರವಿ ಕಾಣದ ಒಂದು ನೋಟ
ಹೃದಯ ಮಾತ್ರ ಕಾಣಬಹುದು
ಅದು ಇಲ್ಲಿಗೆ ಸಾಧ್ಯವೆ?
ನದಿ ಸಾಗರ ಸೇರಬಹುದೆ
ಸಂಗಮದಲೆ ಮೂಡಬಹುದೆ
ಕಾಯುವುದೆ ತಪಸಾಗಿದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರಾಮತ್ತು
Next post ಸಾವು

ಸಣ್ಣ ಕತೆ

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…