ಬುರ್ಖಾ ಬಿಟ್ಟು ಹೊರಗೆ ಬಾರವ್ವ

ಬುರ್ಖಾ ಬಿಟ್ಟು ಹೊರಗೆ ಬಾರವ್ವ – ಓ ತಂಗಿ
ಹೊಸಿಲ ದಾಟಿ ಲೋಕ ನೋಡವ್ವ

ತಲೆಯ ಮ್ಯಾಗಿನ ಸೆರಗ ತೆಗಿಯವ್ವ – ಓ ತಂಗಿ
ಅದನ್ನೆತ್ತಿ ಸೊಂಟಕೆ ಸಿಕ್ಕಿಸವ್ವ

ನೀನು ಬಣ್ಣದ ಗೊಂಬಿ ಅಲ್ಲವ್ವ – ಓ ತಂಗಿ
ನಿನ್ನ ಸೂತ್ರ ನನ್ನಲ್ಯಾಕವ್ವ

ಕೆರೆಗೆ ಹಾರ ನೀನು ಆದ್ಯವ್ವ – ಅದೇ ಪಾತ್ರಕೆ
ನನಗೆ ನೀನು ಕೇಳದೆ ಹೋದ್ಯವ್ವ

ಪಾತಿವ್ರತ್ಯ ನಿನಗೆ ಮಾತ್ರಾನೆ – ಅದೇ ನೀತಿ
ಗಂಡಿಗೆ ಇಲ್ಲ ಕೇಳೋದಿಲ್ವೇನೆ!

ಸಾವಿರ ಸಖಿಯರು ಕೃಷ್ಣನಿಗಲ್ವೇನೆ – ಹಾಗಿದ್ಮೇಲೆ
ಸಖಿಯರು ಕೂಡ ಕೃಷ್ಣರೆ ಅಲ್ವೇನೆ?

ನವಿಲ ಹೆಜ್ಜೆ ಇನ್ನು ಸಾಕವ್ವ – ಓ ತಂಗಿ
ಹುಲಿ ಹೆಜ್ಜೆ ಸ್ವಲ್ಪ ಹಾಕವ್ವ

ಇನ್ನೂ ಯಾಕೆ ನೀನು ಸುಕುಮಾರಿ – ನುಗ್ಗೆ ಮರ
ಹತ್ತಿಸುವವರು ನಿನಗೆ ಹೇಗೆ ಸರಿ?

ನಾನು ಕಲಿತು ಮಾತಾಡುತ್ತಿರುವೆ – ಅನುಭವದ್ಹೆಣ್ಣೆ
ನೀನು ಯಾಕೆ ಇನ್ನೂ ಮೌನಾನೆ?!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎರಡು ರೆಕ್ಕೆಗಳು
Next post ವಂಚಿತೆ

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…