ಕನಕ-ಕೃಷ್ಣ

ಕನಕ ಕುರಿ ಕಾಯುತ್ತಿದ್ದ
ಕೃಷ್ಣ ದನ ಮೇಯಿಸುತ್ತಿದ್ದ
ಪರಿಚಯವಾಯಿತು ಹೆಚ್ಚೇನಿಲ್ಲ…

ಕನಕ ರೊಟ್ಟಿ ಒಯ್ಯುತ್ತಿದ್ದ
ಕೃಷ್ಣ ಬೆಣ್ಣೆ ಹಚ್ಚುತ್ತಿದ್ದ
ಹಂಚಿಕೊಂಡು ಉಂಡರು ಹೆಚ್ಚೇನಿಲ್ಲ…

ಕನಕನಿಗೆ ಹಾಡು ಕಟ್ಟುವ ಹುಚ್ಚು
ಕೃಷ್ಣನಿಗೆ ಕೊಳಲು ಅಚ್ಚುಮೆಚ್ಚು
ಗೆಳೆತನ ಕುದುರಿತು ಹೆಚ್ಚೇನಿಲ್ಲ…

ಕನಕ ‘ಬ್ಯ’ ‘ಬ್ಯಾ’ ಎಂದೂ
ಕೃಷ್ಣ ‘ಅಂಬಾ’ ಎಂದೂ
‘ಕಿರ್ ಕಿರ್’ ‘ಮುರ್ ಮುರ್’ ಕೂಗು ಹಾಕಿ
ಕೂಡಿ-ಆಡಿ ನಲಿದರು ಹೆಚ್ಚೇನಿಲ್ಲ…

ಕೃಷ್ಣ ಮಹಾತುಂಟ, ತುಡುಗ,
ತರಲೆ, ಜಗಳಗಂಟ…
ಕನಕ ಅವನ ಭಂಟ, ನೆಂಟ, ಸರ್ವಸ್ವ…
ಇಬ್ಬರೂ ಬದುಕಿ-ಬಾಳಿದರು ಹೆಚ್ಚೇನಿಲ್ಲ…

ಕುಲದ ನೆಲೆಯಲ್ಲ… ಕಾಲದ ಹಂಗಿಲ್ಲ…
ಕನಕ ಮಣ್ಣಾದ, ಕೃಷ್ಣ ಕಲ್ಲಾದ…
ಇದೊಂದು ಕಲ್ಲು-ಮಣ್ಣಿನ ಕತೆ ಹೆಚ್ಚೇನಿಲ್ಲ…
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭ್ರಮಣ – ೧೨
Next post ಬಿಡು

ಸಣ್ಣ ಕತೆ

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…