ಕುಣಿಯೋದು

ಈ ಮಣ್ಣಲಿ ಹುಟ್ಟಿದ ಮ್ಯಾಲೆ ಕುಣಿಯೋದೊಂದೇ ಕೆಲಸ || ಪ ||

ಮನಸು ನಿನ್ನ ಕೈಯಲಿರಲಿ ಬುದ್ದಿ ಅದರ ಮೇಲೆ
ಎಲ್ಲರ ಕುಣಿಸುವನೊಬ್ಬ ಇರುವನೊ ಎಲ್ಲರ ಮೇಲೆ || ೧ ||

ತಾಳಕ್ಕೆ ಕಾಲು ಹಾಕೊ ಕಾಲಕ್ಕೆ ಹೊಂದಿರಬೇಕು
ಒಂದ್ಹೆಜ್ಜೆ ತಪ್ಪಲು ನೀನು ದಂಡಾ ಕೊಡಲು ಬೇಕು || ೨ ||

ಬಡತನದ ಗೋಳಿನ ಆಟ ಸಿರಿತನದ ಸೊಕ್ಕಿನ ಆಟ
ಕತ್ತಲು ಬೆಳಕುಗಳಲ್ಲಿ ಕಣ್ಣಾ ಮುಚ್ಚಾಲೆಯಾಟ || ೩ ||

ಅತ್ತಿತ್ತ ನೋಡಬೇಡ ಮತ್ತೊಬ್ಬರ ಚಿಂತೆ ಬೇಡ
ದೇಹವಿಲ್ಲಿ ಕುಣಿಯುತಿರಲಿ ಮನಸೆಲಾ ಅವನೆಡೆಗಿರಲಿ || ೪ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನನ್ನೂರಿನವರು
Next post ಅನುಭಾವಿ ಚಿಂತಕ – ವಿಟ್‌ಮ್ಯಾನ್ ಕವಿತೆಗಳು

ಸಣ್ಣ ಕತೆ

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…