ವಠಾರ

ವಠಾರ

ವಠಾರ ಮೊದಲಿಗೆ ಪ್ರಕಟವಾದದ್ದು ಕಾಸರಗೋಡಿನ ನವ್ಯ ಸಾಹಿತ್ಯ ಸಂಘದ ಮೂಲಕ ಏಪ್ರಿಲ್ ೧೯೬೯ ರಲ್ಲಿ. ಆಗ ಅಚ್ಚುಹಾಕಿಸಿದ್ದು ಕೆಲವೇ ಪ್ರತಿಗಳು. ಅದ್ದರಿಂದ ಅಕ್ಷರ ಪ್ರಕಾಶನದ ಮೂಲಕ ಈಗ ಮತ್ತೊಮ್ಮೆ ಪ್ರಕಟಣೆ.

ಈ ಸಂಕಲನದ ಹದಿನಾರು ಕವಿತೆಗಳು ೧೯೬೮-೧೯೬೯ರಲ್ಲಿ ಬರೆದವು. ಮತ್ತು ಇದು ನನ್ನ ಮೊದಲ ಕವನ ಸಂಕಲನವಾದ “ಮುಖವಾಡಗಳ” ಬೆನ್ನ ಹಿಂದೆಯೇ ಬಂತು. ಇದಕ್ಕೆ ಪ್ರೇರಣೆ “ಮುಖವಾಡಗಳು” ನನ್ನ ಪರಿಸರದಿಂದ ತಂದುಕೊಟ್ಟ ಕಿರುಕುಳ. ವಠಾರದಲ್ಲಿ ಕಂಡುಬರುವ ಹಲವು ಪ್ರತಿಮೆಗಳನ್ನು ಧ್ವನಿಗಳನ್ನು ಈ ದೃಷ್ಟಿಯಿಂದ ಗಮನಿಸಬೇಕು.

‘ವಠಾರ’ ಅಥವಾ ‘ಪರಿಸರ’ ಎಂಬ ಪದ ಕಳೆದ ಕೆಲವು ವರ್ಷಗಳಿಂದ ಹೊಸ ಅರ್ಥ ಪಡೆದುಕೊಂಡದ್ದು ಕಂಡು ಬರುತ್ತದೆ. ವಾತಾವರಣ ಮಾಲಿನ್ಯದ ಕುರಿತು ಹೊಸ ಜಿಜ್ಞಾಸೆ ನಡೆದಿದೆ. ನಾಗರಿಕತೆಯ ಪರಿಣಾಮವಾಗಿ ಒಂದು ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದೆ. ಬದುಕುವುದಕ್ಕೆ ಬಿಡಿ ಎಂದು ಮನುಷ್ಯ ಕೂಗುವಂತಾಗಿದೆ. ನಾನು ‘ವಠಾರ’ ಎಂಬ ಪದವನ್ನು ಈ ಪಾರಿಭಾಷಿಕ ಅರ್ಥದಲ್ಲಿ ಉಪಯೋಗಿಸಿದ್ದರೂ ಇದೊಂದೇ ಅರ್ಥದಲ್ಲಲ್ಲ. ಕೊಳೆಯುತ್ತಿರುವ ಪರಿಸರ ಸಮೂಹ ವ್ಯಕ್ತಿತ್ವದ ಮೇಲೆ ಯಾವ ಪರಿಣಾಮ ಉಂಟುಮಾಡುತ್ತಿದೆ? -ಎಂಬಿತ್ಯಾದಿ ಪ್ರಶ್ನೆಗಳು ಒಂದಲ್ಲ ಒಂದು ಹಂತದಲ್ಲಿ ಇಲ್ಲಿನ ಕವಿತೆಗಳಲ್ಲಿ ಕಾಣಿಸಬಹುದು. ಇವುಗಳನ್ನೋದಿದಾಗ ಒಂದು ರೀತಿಯ ರೊಚ್ಚು, ಸಿಡುಕು, ತಮಾಷೆ, ಅವಹೇಳನದ ಅಸಂಬದ್ಧ ಮೂಡು ಉಂಟಾದರೆ ಅದು ನಾನು ನನ್ನ ವಠಾರವನ್ನು ಅರ್ಥವಿಸುವ ಬಗೆ. ಮನುಷ್ಯ ಹುಚ್ಚನಾಗುವುದನ್ನು ತಪ್ಟಿಸುವುದು ಹೇಗೆ-ಎಂಬ ವಿಚಾರವನ್ನು ಓದುಗರಲ್ಲಿ ಎಬ್ಬಿಸುವುದಕ್ಕಾಗಿ ಈ ಹೊಸ ಮುಖವಾಡ. ಅಲ್ಲಲ್ಲಿ ಬರುವ ತೀರ ಹಗುರವಾದ ಟೋನ್ ಬೇಕೆಂದೇ ಉಪಯೋಗಿಸಿದ್ದು.

ಈ ಕವಿತೆಗಳಿಗೆ ವಿಚಾರದ. ಶೈಲಿಯ ಬೇರೆ ಬೇರೆ ಸ್ತರಗಳನ್ನು ಕೊಡುವುದಕ್ಕೆ ಪ್ರಯತ್ನಿಸಿದ್ದೇನೆ. ಇಲ್ಲಿಯ ರೊಚ್ಚಿನಲ್ಲೂ ಅನುಕಂಪವಿದೆ. ಸಾಧಾರಣವೆನಿಸುವ ಸಾಲುಗಳಲ್ಲಿಯೂ ಅಲ್ಲಲ್ಲಿ ಘಾತಗಳಿವೆ. ರೂಢಿ ಮಾತುಗಳಿಗೆ ಹೊಸ ತಿರುವನ್ನು ಕೊಡಲಾಗಿದೆ.

ಮುಖವಾಡಗಳು ಸ್ವಲ್ಪಮಟ್ಟಿಗೆ ಅನುಕರಣ ಶೀಲತೆಯನ್ನು ಹೊಂದಿರುವುದು ಅನಿವಾರ್ಯವಾಗಿತ್ತು. ಅದರಲ್ಲಿಯೂ ನನ್ನದೇ ಲಯಗಳನ್ನು ಗುರುತಿಸುವ ಪ್ರಯತ್ನ ಮಾಡಿದ್ದೆ. ವಠಾರ ಅಂತಹ ಇನ್ನೊಂದು ಪ್ರಯತ್ನ. ಇದೊಂದು ಮಹತ್ವಾಕಾಂಕ್ಷೆಯ ಕೃತಿಯೇನೂ ಅಲ್ಲ. ವಠಾರ ನನ್ನ ಓದುಗರಲ್ಲಿ ಒಂದಿಷ್ಟು ನಗರ ಪ್ರಜ್ಞೆಯನ್ನೂ ಪರಿಸರ ಬೋಧವನ್ನೂ ಉಂಟುಮಾಡಿದರೆ ಅಲ್ಲಿಗೆ ಅದು ಅರ್ಥಪೂರ್ಣ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೫೯
Next post ಕಾಣೆಯಾದವರು

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…