ವಠಾರ

ವಠಾರ ಮೊದಲಿಗೆ ಪ್ರಕಟವಾದದ್ದು ಕಾಸರಗೋಡಿನ ನವ್ಯ ಸಾಹಿತ್ಯ ಸಂಘದ ಮೂಲಕ ಏಪ್ರಿಲ್ ೧೯೬೯ ರಲ್ಲಿ. ಆಗ ಅಚ್ಚುಹಾಕಿಸಿದ್ದು ಕೆಲವೇ ಪ್ರತಿಗಳು. ಅದ್ದರಿಂದ ಅಕ್ಷರ ಪ್ರಕಾಶನದ ಮೂಲಕ ಈಗ ಮತ್ತೊಮ್ಮೆ ಪ್ರಕಟಣೆ.

ಈ ಸಂಕಲನದ ಹದಿನಾರು ಕವಿತೆಗಳು ೧೯೬೮-೧೯೬೯ರಲ್ಲಿ ಬರೆದವು. ಮತ್ತು ಇದು ನನ್ನ ಮೊದಲ ಕವನ ಸಂಕಲನವಾದ “ಮುಖವಾಡಗಳ” ಬೆನ್ನ ಹಿಂದೆಯೇ ಬಂತು. ಇದಕ್ಕೆ ಪ್ರೇರಣೆ “ಮುಖವಾಡಗಳು” ನನ್ನ ಪರಿಸರದಿಂದ ತಂದುಕೊಟ್ಟ ಕಿರುಕುಳ. ವಠಾರದಲ್ಲಿ ಕಂಡುಬರುವ ಹಲವು ಪ್ರತಿಮೆಗಳನ್ನು ಧ್ವನಿಗಳನ್ನು ಈ ದೃಷ್ಟಿಯಿಂದ ಗಮನಿಸಬೇಕು.

‘ವಠಾರ’ ಅಥವಾ ‘ಪರಿಸರ’ ಎಂಬ ಪದ ಕಳೆದ ಕೆಲವು ವರ್ಷಗಳಿಂದ ಹೊಸ ಅರ್ಥ ಪಡೆದುಕೊಂಡದ್ದು ಕಂಡು ಬರುತ್ತದೆ. ವಾತಾವರಣ ಮಾಲಿನ್ಯದ ಕುರಿತು ಹೊಸ ಜಿಜ್ಞಾಸೆ ನಡೆದಿದೆ. ನಾಗರಿಕತೆಯ ಪರಿಣಾಮವಾಗಿ ಒಂದು ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದೆ. ಬದುಕುವುದಕ್ಕೆ ಬಿಡಿ ಎಂದು ಮನುಷ್ಯ ಕೂಗುವಂತಾಗಿದೆ. ನಾನು ‘ವಠಾರ’ ಎಂಬ ಪದವನ್ನು ಈ ಪಾರಿಭಾಷಿಕ ಅರ್ಥದಲ್ಲಿ ಉಪಯೋಗಿಸಿದ್ದರೂ ಇದೊಂದೇ ಅರ್ಥದಲ್ಲಲ್ಲ. ಕೊಳೆಯುತ್ತಿರುವ ಪರಿಸರ ಸಮೂಹ ವ್ಯಕ್ತಿತ್ವದ ಮೇಲೆ ಯಾವ ಪರಿಣಾಮ ಉಂಟುಮಾಡುತ್ತಿದೆ? -ಎಂಬಿತ್ಯಾದಿ ಪ್ರಶ್ನೆಗಳು ಒಂದಲ್ಲ ಒಂದು ಹಂತದಲ್ಲಿ ಇಲ್ಲಿನ ಕವಿತೆಗಳಲ್ಲಿ ಕಾಣಿಸಬಹುದು. ಇವುಗಳನ್ನೋದಿದಾಗ ಒಂದು ರೀತಿಯ ರೊಚ್ಚು, ಸಿಡುಕು, ತಮಾಷೆ, ಅವಹೇಳನದ ಅಸಂಬದ್ಧ ಮೂಡು ಉಂಟಾದರೆ ಅದು ನಾನು ನನ್ನ ವಠಾರವನ್ನು ಅರ್ಥವಿಸುವ ಬಗೆ. ಮನುಷ್ಯ ಹುಚ್ಚನಾಗುವುದನ್ನು ತಪ್ಟಿಸುವುದು ಹೇಗೆ-ಎಂಬ ವಿಚಾರವನ್ನು ಓದುಗರಲ್ಲಿ ಎಬ್ಬಿಸುವುದಕ್ಕಾಗಿ ಈ ಹೊಸ ಮುಖವಾಡ. ಅಲ್ಲಲ್ಲಿ ಬರುವ ತೀರ ಹಗುರವಾದ ಟೋನ್ ಬೇಕೆಂದೇ ಉಪಯೋಗಿಸಿದ್ದು.

ಈ ಕವಿತೆಗಳಿಗೆ ವಿಚಾರದ. ಶೈಲಿಯ ಬೇರೆ ಬೇರೆ ಸ್ತರಗಳನ್ನು ಕೊಡುವುದಕ್ಕೆ ಪ್ರಯತ್ನಿಸಿದ್ದೇನೆ. ಇಲ್ಲಿಯ ರೊಚ್ಚಿನಲ್ಲೂ ಅನುಕಂಪವಿದೆ. ಸಾಧಾರಣವೆನಿಸುವ ಸಾಲುಗಳಲ್ಲಿಯೂ ಅಲ್ಲಲ್ಲಿ ಘಾತಗಳಿವೆ. ರೂಢಿ ಮಾತುಗಳಿಗೆ ಹೊಸ ತಿರುವನ್ನು ಕೊಡಲಾಗಿದೆ.

ಮುಖವಾಡಗಳು ಸ್ವಲ್ಪಮಟ್ಟಿಗೆ ಅನುಕರಣ ಶೀಲತೆಯನ್ನು ಹೊಂದಿರುವುದು ಅನಿವಾರ್ಯವಾಗಿತ್ತು. ಅದರಲ್ಲಿಯೂ ನನ್ನದೇ ಲಯಗಳನ್ನು ಗುರುತಿಸುವ ಪ್ರಯತ್ನ ಮಾಡಿದ್ದೆ. ವಠಾರ ಅಂತಹ ಇನ್ನೊಂದು ಪ್ರಯತ್ನ. ಇದೊಂದು ಮಹತ್ವಾಕಾಂಕ್ಷೆಯ ಕೃತಿಯೇನೂ ಅಲ್ಲ. ವಠಾರ ನನ್ನ ಓದುಗರಲ್ಲಿ ಒಂದಿಷ್ಟು ನಗರ ಪ್ರಜ್ಞೆಯನ್ನೂ ಪರಿಸರ ಬೋಧವನ್ನೂ ಉಂಟುಮಾಡಿದರೆ ಅಲ್ಲಿಗೆ ಅದು ಅರ್ಥಪೂರ್ಣ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...