ವಠಾರ

ವಠಾರ ಮೊದಲಿಗೆ ಪ್ರಕಟವಾದದ್ದು ಕಾಸರಗೋಡಿನ ನವ್ಯ ಸಾಹಿತ್ಯ ಸಂಘದ ಮೂಲಕ ಏಪ್ರಿಲ್ ೧೯೬೯ ರಲ್ಲಿ. ಆಗ ಅಚ್ಚುಹಾಕಿಸಿದ್ದು ಕೆಲವೇ ಪ್ರತಿಗಳು. ಅದ್ದರಿಂದ ಅಕ್ಷರ ಪ್ರಕಾಶನದ ಮೂಲಕ ಈಗ ಮತ್ತೊಮ್ಮೆ ಪ್ರಕಟಣೆ.

ಈ ಸಂಕಲನದ ಹದಿನಾರು ಕವಿತೆಗಳು ೧೯೬೮-೧೯೬೯ರಲ್ಲಿ ಬರೆದವು. ಮತ್ತು ಇದು ನನ್ನ ಮೊದಲ ಕವನ ಸಂಕಲನವಾದ “ಮುಖವಾಡಗಳ” ಬೆನ್ನ ಹಿಂದೆಯೇ ಬಂತು. ಇದಕ್ಕೆ ಪ್ರೇರಣೆ “ಮುಖವಾಡಗಳು” ನನ್ನ ಪರಿಸರದಿಂದ ತಂದುಕೊಟ್ಟ ಕಿರುಕುಳ. ವಠಾರದಲ್ಲಿ ಕಂಡುಬರುವ ಹಲವು ಪ್ರತಿಮೆಗಳನ್ನು ಧ್ವನಿಗಳನ್ನು ಈ ದೃಷ್ಟಿಯಿಂದ ಗಮನಿಸಬೇಕು.

‘ವಠಾರ’ ಅಥವಾ ‘ಪರಿಸರ’ ಎಂಬ ಪದ ಕಳೆದ ಕೆಲವು ವರ್ಷಗಳಿಂದ ಹೊಸ ಅರ್ಥ ಪಡೆದುಕೊಂಡದ್ದು ಕಂಡು ಬರುತ್ತದೆ. ವಾತಾವರಣ ಮಾಲಿನ್ಯದ ಕುರಿತು ಹೊಸ ಜಿಜ್ಞಾಸೆ ನಡೆದಿದೆ. ನಾಗರಿಕತೆಯ ಪರಿಣಾಮವಾಗಿ ಒಂದು ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದೆ. ಬದುಕುವುದಕ್ಕೆ ಬಿಡಿ ಎಂದು ಮನುಷ್ಯ ಕೂಗುವಂತಾಗಿದೆ. ನಾನು ‘ವಠಾರ’ ಎಂಬ ಪದವನ್ನು ಈ ಪಾರಿಭಾಷಿಕ ಅರ್ಥದಲ್ಲಿ ಉಪಯೋಗಿಸಿದ್ದರೂ ಇದೊಂದೇ ಅರ್ಥದಲ್ಲಲ್ಲ. ಕೊಳೆಯುತ್ತಿರುವ ಪರಿಸರ ಸಮೂಹ ವ್ಯಕ್ತಿತ್ವದ ಮೇಲೆ ಯಾವ ಪರಿಣಾಮ ಉಂಟುಮಾಡುತ್ತಿದೆ? -ಎಂಬಿತ್ಯಾದಿ ಪ್ರಶ್ನೆಗಳು ಒಂದಲ್ಲ ಒಂದು ಹಂತದಲ್ಲಿ ಇಲ್ಲಿನ ಕವಿತೆಗಳಲ್ಲಿ ಕಾಣಿಸಬಹುದು. ಇವುಗಳನ್ನೋದಿದಾಗ ಒಂದು ರೀತಿಯ ರೊಚ್ಚು, ಸಿಡುಕು, ತಮಾಷೆ, ಅವಹೇಳನದ ಅಸಂಬದ್ಧ ಮೂಡು ಉಂಟಾದರೆ ಅದು ನಾನು ನನ್ನ ವಠಾರವನ್ನು ಅರ್ಥವಿಸುವ ಬಗೆ. ಮನುಷ್ಯ ಹುಚ್ಚನಾಗುವುದನ್ನು ತಪ್ಟಿಸುವುದು ಹೇಗೆ-ಎಂಬ ವಿಚಾರವನ್ನು ಓದುಗರಲ್ಲಿ ಎಬ್ಬಿಸುವುದಕ್ಕಾಗಿ ಈ ಹೊಸ ಮುಖವಾಡ. ಅಲ್ಲಲ್ಲಿ ಬರುವ ತೀರ ಹಗುರವಾದ ಟೋನ್ ಬೇಕೆಂದೇ ಉಪಯೋಗಿಸಿದ್ದು.

ಈ ಕವಿತೆಗಳಿಗೆ ವಿಚಾರದ. ಶೈಲಿಯ ಬೇರೆ ಬೇರೆ ಸ್ತರಗಳನ್ನು ಕೊಡುವುದಕ್ಕೆ ಪ್ರಯತ್ನಿಸಿದ್ದೇನೆ. ಇಲ್ಲಿಯ ರೊಚ್ಚಿನಲ್ಲೂ ಅನುಕಂಪವಿದೆ. ಸಾಧಾರಣವೆನಿಸುವ ಸಾಲುಗಳಲ್ಲಿಯೂ ಅಲ್ಲಲ್ಲಿ ಘಾತಗಳಿವೆ. ರೂಢಿ ಮಾತುಗಳಿಗೆ ಹೊಸ ತಿರುವನ್ನು ಕೊಡಲಾಗಿದೆ.

ಮುಖವಾಡಗಳು ಸ್ವಲ್ಪಮಟ್ಟಿಗೆ ಅನುಕರಣ ಶೀಲತೆಯನ್ನು ಹೊಂದಿರುವುದು ಅನಿವಾರ್ಯವಾಗಿತ್ತು. ಅದರಲ್ಲಿಯೂ ನನ್ನದೇ ಲಯಗಳನ್ನು ಗುರುತಿಸುವ ಪ್ರಯತ್ನ ಮಾಡಿದ್ದೆ. ವಠಾರ ಅಂತಹ ಇನ್ನೊಂದು ಪ್ರಯತ್ನ. ಇದೊಂದು ಮಹತ್ವಾಕಾಂಕ್ಷೆಯ ಕೃತಿಯೇನೂ ಅಲ್ಲ. ವಠಾರ ನನ್ನ ಓದುಗರಲ್ಲಿ ಒಂದಿಷ್ಟು ನಗರ ಪ್ರಜ್ಞೆಯನ್ನೂ ಪರಿಸರ ಬೋಧವನ್ನೂ ಉಂಟುಮಾಡಿದರೆ ಅಲ್ಲಿಗೆ ಅದು ಅರ್ಥಪೂರ್ಣ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...