Home / ಲೇಖನ / ವಿಜ್ಞಾನ / ಬೇಕಾದ ಬಣ್ಣಬಣ್ಣದ ಹೂಗಳನ್ನು, ಹತ್ತಿಯನ್ನು ಸೃಷ್ಟಿಸುವ ತಂತ್ರಜ್ಞಾನ

ಬೇಕಾದ ಬಣ್ಣಬಣ್ಣದ ಹೂಗಳನ್ನು, ಹತ್ತಿಯನ್ನು ಸೃಷ್ಟಿಸುವ ತಂತ್ರಜ್ಞಾನ

ಸಾಮಾನ್ಯವಾಗಿ ಇದುವರೆಗೆ ಗುಲಾಬಿ ಹೂಗಳನ್ನು, ಕೆಂಪು, ನೆರಳೆ, ಹಳದಿ ಬಣ್ಣಗಳಲಿ ಕಾಣುತ್ತ ಬಂದಿದ್ದೇವೆ. ಹಾಗೆ ಹತ್ತಿಯನ್ನು ಸಹ ಶ್ವೇತ ವರ್ಣದಲ್ಲಿ ಕಾಣುತ್ತ ಬಂದಿದ್ದೇವೆ. ಆದರೆ ನಮಗಿಷ್ಟವಾದ ಬಣ್ಣಗಳಲ್ಲಿ ಹೂವು ಹತ್ತಿಯನ್ನು ಜೈವಿಕ ತಂತ್ರಜ್ಞಾನದಿಂದ ಪಡೆಯಬಹುದೆಂದು ವಿಜ್ಞಾನಿಗಳು ಸಾಬೀತು ಪಡಿಸಿದ್ದಾರೆ. ಬೇವಿನ ಮರದಲ್ಲಿ ಮಾವನ್ನು, ಮಾವಿನಮರದಲ್ಲಿ ಬೇವನ್ನು ಹೀಗೆ ಹಣ್ಣುಗಳ ಜಾತಿಗಳನ್ನು ವಿಭಿನ್ನ ಜಾತಿಯ ಮರಗಳಲ್ಲಿ ಪಡೆಯಬಹುದೆಂಬುವುದು ಆಶ್ಚರ್ಯ. ಆದರೆ ಈ ಕಲ್ಪನೆಗಳೆಲ್ಲ ಸತ್ಯವಾಗುತ್ತಲಿವೆ. ಸೃಷ್ಟಿ ಸಹಸ ಕ್ರಿಯೆಗೆ ಜೈವಿಕ ಸಂಚಲನದಿಂದ ಹೀಗೆಲ್ಲ ಮಾಡಬಹುದೆಂದು ವಿಜ್ಞಾನಿಗಳು ಕಂಡು ಹಿಡಿಯುತ್ತಲೇ ಇದ್ದಾರೆ.

ಹಳದಿ, ಕೆಂಪು, ನೆರಳೆ ಗುಲಾಬಿ ಹೂಗಳು ನಿಸರ್ಗದಲ್ಲಿವೆ. ಇವುಗಳನ್ನು ನಮಗಿಷ್ಟ ಬಂದ ಬಣ್ಣಗಳಲ್ಲಿ ಬೆಳೆಯಲು ಹಾಲೆಂಡಿನಲ್ಲಿ ಸಂಶೋಧನೆಗಳು ನಡೆಯುತ್ತಲಿವೆ. ಸೂಕ್ತ ಬಣ್ಣದ ವಂಶಾಣುಗಳನ್ನು ಇತರೆಹೂಗಳಿಂದ ತೆಗೆದು ಇತರ ಹೂಗಳಿಗೆ ಸಂಯೋಜನೆ ಮಾಡಿದರಾಯಿತು. ಈವರೆಗೆ ಅಸಾಧ್ಯವೆನಿಸಿದ ಜೆರ್ಮೇನಿಯಂ ಲೋಹದ ಇಟ್ಟಿಗೆ ಕೆಂಪು ವರ್ಣವನ್ನು ಸೃಷ್ಟಿಸುವುದು ಅಸಾಧ್ಯವೆಂದು ತಿಳಿಯಲಾಗಿತ್ತು ಮೆಕ್ಕೆ ಜೋಳದ ಬಣ್ಣದ ವಂಶಾಣುವನ್ನು ಗುಲಾಬಿ ತಳಿಗೆ ವರ್ಗಾಯಿಸಿ ಈಗ ಆವರ್ಣದ ಗುಲಾಬಿಯನ್ನು ಬೆಳೆಯಲಾಗಿದೆ. ಈ ಬಣ್ಣಗಳಲ್ಲದೇ ನಿಸರ್ಗದ ಇತರೇ ವಿನ್ಯಾಸಗಳನ್ನು ಹೂಗಳಲ್ಲಿ ಮೂಡಿಸುವ ಪ್ರಯತ್ನಗಳು ನಡೆದಿವೆ. ನಮಗೆಲ್ಲ ತಿಳಿದಿರುವಂತೆ ನೀಲಿ ಹತ್ತಿಯನ್ನು ಧಾರವಾಡದಲ್ಲಿ ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದೆ. ಇತರೆ ವರ್ಣದ ಹತ್ತಿಯನ್ನು ಬೆಳೆಯಲು ಸಾಧ್ಯವಾದರೆ ಬೇರೆ ಬಣ್ಣಗಳನ್ನು ಹತ್ತಿಗೆ ಸೇರಿಸಿ ಬಣ್ಣ ಬಣ್ಣದ ಬಟ್ಟೆಗಳನ್ನು ತಯಾರಿಸುವ ಕೈಗಾರಿಕೆಗಳಿಗೆ ಹೊಡೆತಬೀಳಬಹುದು. ಈ ಕೈಗಾರಿಕೆಯಲ್ಲಿ ಬಳೆಸುತ್ತಿರುವ ಸೀಸ ಲೋಹ ಮೂಲದ ವರ್ಣದ್ರವ್ಯಗಳು ವಿಷಕಾರಕವೆನಿಸಿದ್ದು ಕಾರ್ಮಿಕರ ಮತ್ತು ಕೈಗಾರಿಕಾ ವರ್ಜೋಜಲ ಹರಿವ ನೀರಿಗೆ ಸೀಸವನ್ನು ಸೇರಿಸಿ ನೀರಿನಲ್ಲಿರುವ ಪ್ರಾಣಿಗಳಿಗೆ ಹಾಗೂ ಅದನ್ನು ಸೇವಿಸುವ ಪ್ರಾಣಿಗಳಿಗೆ ಅಪಾಯಕಾರಿಯೆಂದು ಸಾಬೀತಾಗಿದೆ. ಇಂಥಹ ಹೊಸ ಸಂಶೋಧನೆಗಳು ಕೈಗಾರಿಕಾ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡುವುದಲ್ಲದೇ ಪರಿಸರಮಾಲಿನ್ಯ ತಡೆಯುವಲ್ಲಿ ಮಹತ್ವದ ಪಾತ್ರವಹಿಸುತ್ತವೆ.

ಈಗಾಗಲೇ ನಿಸರ್ಗಲ್ಲಿರುವ ಸುಗಂಧ ಪುಪ್ಪಗಳು, ಹಣ್ಣುಗಳು, ತರಕಾರಿಗಳು ನಿಸರ್ಗದ ಮಿಲಿಯಾಂತರ ವರ್ಷಗಳ ವಿಕಾಸದಿಂದ ಸೃಷ್ಟಿಯಾಗಿವೆ. ನಿಸರ್ಗದ ಮೂಲವನ್ನೂ ಅರಿತು ಅದರ ತಂತ್ರವನ್ನು ಮನುಷ್ಯನ ಜೈವಿಕ ತಂತ್ರಜ್ಞಾನದಲ್ಲಿ ಬಳಸಿ ಆಕ್ರಿಯೆಗೆ ಬೇಕಾಗುವ ಮಿಲಿಯಾಂತರ ವರ್ಷಗಳ ಬದಲು ಒಂದೆರೆಡು ವರ್ಷಗಳಲ್ಲಿಯೇ ಅದನ್ನು ಸಾಧಿಸಬಹುದು. ಇದರಿಂದಾಗಿ ವಿಕಾಸವನ್ನು ವೇಗಗೊಳಿಸುವ ಪ್ರಯತ್ನದಲ್ಲಿ ಜೈವಿಕ ತಂತ್ರಜ್ಞಾನ ಪ್ರಮುಖ ಪಾತ್ರವನ್ನೂ ವಹಿಸುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...