Home / ಲೇಖನ / ವಿಜ್ಞಾನ / ಬೇಕಾದ ಬಣ್ಣಬಣ್ಣದ ಹೂಗಳನ್ನು, ಹತ್ತಿಯನ್ನು ಸೃಷ್ಟಿಸುವ ತಂತ್ರಜ್ಞಾನ

ಬೇಕಾದ ಬಣ್ಣಬಣ್ಣದ ಹೂಗಳನ್ನು, ಹತ್ತಿಯನ್ನು ಸೃಷ್ಟಿಸುವ ತಂತ್ರಜ್ಞಾನ

ಸಾಮಾನ್ಯವಾಗಿ ಇದುವರೆಗೆ ಗುಲಾಬಿ ಹೂಗಳನ್ನು, ಕೆಂಪು, ನೆರಳೆ, ಹಳದಿ ಬಣ್ಣಗಳಲಿ ಕಾಣುತ್ತ ಬಂದಿದ್ದೇವೆ. ಹಾಗೆ ಹತ್ತಿಯನ್ನು ಸಹ ಶ್ವೇತ ವರ್ಣದಲ್ಲಿ ಕಾಣುತ್ತ ಬಂದಿದ್ದೇವೆ. ಆದರೆ ನಮಗಿಷ್ಟವಾದ ಬಣ್ಣಗಳಲ್ಲಿ ಹೂವು ಹತ್ತಿಯನ್ನು ಜೈವಿಕ ತಂತ್ರಜ್ಞಾನದಿಂದ ಪಡೆಯಬಹುದೆಂದು ವಿಜ್ಞಾನಿಗಳು ಸಾಬೀತು ಪಡಿಸಿದ್ದಾರೆ. ಬೇವಿನ ಮರದಲ್ಲಿ ಮಾವನ್ನು, ಮಾವಿನಮರದಲ್ಲಿ ಬೇವನ್ನು ಹೀಗೆ ಹಣ್ಣುಗಳ ಜಾತಿಗಳನ್ನು ವಿಭಿನ್ನ ಜಾತಿಯ ಮರಗಳಲ್ಲಿ ಪಡೆಯಬಹುದೆಂಬುವುದು ಆಶ್ಚರ್ಯ. ಆದರೆ ಈ ಕಲ್ಪನೆಗಳೆಲ್ಲ ಸತ್ಯವಾಗುತ್ತಲಿವೆ. ಸೃಷ್ಟಿ ಸಹಸ ಕ್ರಿಯೆಗೆ ಜೈವಿಕ ಸಂಚಲನದಿಂದ ಹೀಗೆಲ್ಲ ಮಾಡಬಹುದೆಂದು ವಿಜ್ಞಾನಿಗಳು ಕಂಡು ಹಿಡಿಯುತ್ತಲೇ ಇದ್ದಾರೆ.

ಹಳದಿ, ಕೆಂಪು, ನೆರಳೆ ಗುಲಾಬಿ ಹೂಗಳು ನಿಸರ್ಗದಲ್ಲಿವೆ. ಇವುಗಳನ್ನು ನಮಗಿಷ್ಟ ಬಂದ ಬಣ್ಣಗಳಲ್ಲಿ ಬೆಳೆಯಲು ಹಾಲೆಂಡಿನಲ್ಲಿ ಸಂಶೋಧನೆಗಳು ನಡೆಯುತ್ತಲಿವೆ. ಸೂಕ್ತ ಬಣ್ಣದ ವಂಶಾಣುಗಳನ್ನು ಇತರೆಹೂಗಳಿಂದ ತೆಗೆದು ಇತರ ಹೂಗಳಿಗೆ ಸಂಯೋಜನೆ ಮಾಡಿದರಾಯಿತು. ಈವರೆಗೆ ಅಸಾಧ್ಯವೆನಿಸಿದ ಜೆರ್ಮೇನಿಯಂ ಲೋಹದ ಇಟ್ಟಿಗೆ ಕೆಂಪು ವರ್ಣವನ್ನು ಸೃಷ್ಟಿಸುವುದು ಅಸಾಧ್ಯವೆಂದು ತಿಳಿಯಲಾಗಿತ್ತು ಮೆಕ್ಕೆ ಜೋಳದ ಬಣ್ಣದ ವಂಶಾಣುವನ್ನು ಗುಲಾಬಿ ತಳಿಗೆ ವರ್ಗಾಯಿಸಿ ಈಗ ಆವರ್ಣದ ಗುಲಾಬಿಯನ್ನು ಬೆಳೆಯಲಾಗಿದೆ. ಈ ಬಣ್ಣಗಳಲ್ಲದೇ ನಿಸರ್ಗದ ಇತರೇ ವಿನ್ಯಾಸಗಳನ್ನು ಹೂಗಳಲ್ಲಿ ಮೂಡಿಸುವ ಪ್ರಯತ್ನಗಳು ನಡೆದಿವೆ. ನಮಗೆಲ್ಲ ತಿಳಿದಿರುವಂತೆ ನೀಲಿ ಹತ್ತಿಯನ್ನು ಧಾರವಾಡದಲ್ಲಿ ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದೆ. ಇತರೆ ವರ್ಣದ ಹತ್ತಿಯನ್ನು ಬೆಳೆಯಲು ಸಾಧ್ಯವಾದರೆ ಬೇರೆ ಬಣ್ಣಗಳನ್ನು ಹತ್ತಿಗೆ ಸೇರಿಸಿ ಬಣ್ಣ ಬಣ್ಣದ ಬಟ್ಟೆಗಳನ್ನು ತಯಾರಿಸುವ ಕೈಗಾರಿಕೆಗಳಿಗೆ ಹೊಡೆತಬೀಳಬಹುದು. ಈ ಕೈಗಾರಿಕೆಯಲ್ಲಿ ಬಳೆಸುತ್ತಿರುವ ಸೀಸ ಲೋಹ ಮೂಲದ ವರ್ಣದ್ರವ್ಯಗಳು ವಿಷಕಾರಕವೆನಿಸಿದ್ದು ಕಾರ್ಮಿಕರ ಮತ್ತು ಕೈಗಾರಿಕಾ ವರ್ಜೋಜಲ ಹರಿವ ನೀರಿಗೆ ಸೀಸವನ್ನು ಸೇರಿಸಿ ನೀರಿನಲ್ಲಿರುವ ಪ್ರಾಣಿಗಳಿಗೆ ಹಾಗೂ ಅದನ್ನು ಸೇವಿಸುವ ಪ್ರಾಣಿಗಳಿಗೆ ಅಪಾಯಕಾರಿಯೆಂದು ಸಾಬೀತಾಗಿದೆ. ಇಂಥಹ ಹೊಸ ಸಂಶೋಧನೆಗಳು ಕೈಗಾರಿಕಾ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡುವುದಲ್ಲದೇ ಪರಿಸರಮಾಲಿನ್ಯ ತಡೆಯುವಲ್ಲಿ ಮಹತ್ವದ ಪಾತ್ರವಹಿಸುತ್ತವೆ.

ಈಗಾಗಲೇ ನಿಸರ್ಗಲ್ಲಿರುವ ಸುಗಂಧ ಪುಪ್ಪಗಳು, ಹಣ್ಣುಗಳು, ತರಕಾರಿಗಳು ನಿಸರ್ಗದ ಮಿಲಿಯಾಂತರ ವರ್ಷಗಳ ವಿಕಾಸದಿಂದ ಸೃಷ್ಟಿಯಾಗಿವೆ. ನಿಸರ್ಗದ ಮೂಲವನ್ನೂ ಅರಿತು ಅದರ ತಂತ್ರವನ್ನು ಮನುಷ್ಯನ ಜೈವಿಕ ತಂತ್ರಜ್ಞಾನದಲ್ಲಿ ಬಳಸಿ ಆಕ್ರಿಯೆಗೆ ಬೇಕಾಗುವ ಮಿಲಿಯಾಂತರ ವರ್ಷಗಳ ಬದಲು ಒಂದೆರೆಡು ವರ್ಷಗಳಲ್ಲಿಯೇ ಅದನ್ನು ಸಾಧಿಸಬಹುದು. ಇದರಿಂದಾಗಿ ವಿಕಾಸವನ್ನು ವೇಗಗೊಳಿಸುವ ಪ್ರಯತ್ನದಲ್ಲಿ ಜೈವಿಕ ತಂತ್ರಜ್ಞಾನ ಪ್ರಮುಖ ಪಾತ್ರವನ್ನೂ ವಹಿಸುತ್ತದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...