Home / ಲೇಖನ / ವಿಜ್ಞಾನ / ಬೇಕಾದ ಬಣ್ಣಬಣ್ಣದ ಹೂಗಳನ್ನು, ಹತ್ತಿಯನ್ನು ಸೃಷ್ಟಿಸುವ ತಂತ್ರಜ್ಞಾನ

ಬೇಕಾದ ಬಣ್ಣಬಣ್ಣದ ಹೂಗಳನ್ನು, ಹತ್ತಿಯನ್ನು ಸೃಷ್ಟಿಸುವ ತಂತ್ರಜ್ಞಾನ

ಸಾಮಾನ್ಯವಾಗಿ ಇದುವರೆಗೆ ಗುಲಾಬಿ ಹೂಗಳನ್ನು, ಕೆಂಪು, ನೆರಳೆ, ಹಳದಿ ಬಣ್ಣಗಳಲಿ ಕಾಣುತ್ತ ಬಂದಿದ್ದೇವೆ. ಹಾಗೆ ಹತ್ತಿಯನ್ನು ಸಹ ಶ್ವೇತ ವರ್ಣದಲ್ಲಿ ಕಾಣುತ್ತ ಬಂದಿದ್ದೇವೆ. ಆದರೆ ನಮಗಿಷ್ಟವಾದ ಬಣ್ಣಗಳಲ್ಲಿ ಹೂವು ಹತ್ತಿಯನ್ನು ಜೈವಿಕ ತಂತ್ರಜ್ಞಾನದಿಂದ ಪಡೆಯಬಹುದೆಂದು ವಿಜ್ಞಾನಿಗಳು ಸಾಬೀತು ಪಡಿಸಿದ್ದಾರೆ. ಬೇವಿನ ಮರದಲ್ಲಿ ಮಾವನ್ನು, ಮಾವಿನಮರದಲ್ಲಿ ಬೇವನ್ನು ಹೀಗೆ ಹಣ್ಣುಗಳ ಜಾತಿಗಳನ್ನು ವಿಭಿನ್ನ ಜಾತಿಯ ಮರಗಳಲ್ಲಿ ಪಡೆಯಬಹುದೆಂಬುವುದು ಆಶ್ಚರ್ಯ. ಆದರೆ ಈ ಕಲ್ಪನೆಗಳೆಲ್ಲ ಸತ್ಯವಾಗುತ್ತಲಿವೆ. ಸೃಷ್ಟಿ ಸಹಸ ಕ್ರಿಯೆಗೆ ಜೈವಿಕ ಸಂಚಲನದಿಂದ ಹೀಗೆಲ್ಲ ಮಾಡಬಹುದೆಂದು ವಿಜ್ಞಾನಿಗಳು ಕಂಡು ಹಿಡಿಯುತ್ತಲೇ ಇದ್ದಾರೆ.

ಹಳದಿ, ಕೆಂಪು, ನೆರಳೆ ಗುಲಾಬಿ ಹೂಗಳು ನಿಸರ್ಗದಲ್ಲಿವೆ. ಇವುಗಳನ್ನು ನಮಗಿಷ್ಟ ಬಂದ ಬಣ್ಣಗಳಲ್ಲಿ ಬೆಳೆಯಲು ಹಾಲೆಂಡಿನಲ್ಲಿ ಸಂಶೋಧನೆಗಳು ನಡೆಯುತ್ತಲಿವೆ. ಸೂಕ್ತ ಬಣ್ಣದ ವಂಶಾಣುಗಳನ್ನು ಇತರೆಹೂಗಳಿಂದ ತೆಗೆದು ಇತರ ಹೂಗಳಿಗೆ ಸಂಯೋಜನೆ ಮಾಡಿದರಾಯಿತು. ಈವರೆಗೆ ಅಸಾಧ್ಯವೆನಿಸಿದ ಜೆರ್ಮೇನಿಯಂ ಲೋಹದ ಇಟ್ಟಿಗೆ ಕೆಂಪು ವರ್ಣವನ್ನು ಸೃಷ್ಟಿಸುವುದು ಅಸಾಧ್ಯವೆಂದು ತಿಳಿಯಲಾಗಿತ್ತು ಮೆಕ್ಕೆ ಜೋಳದ ಬಣ್ಣದ ವಂಶಾಣುವನ್ನು ಗುಲಾಬಿ ತಳಿಗೆ ವರ್ಗಾಯಿಸಿ ಈಗ ಆವರ್ಣದ ಗುಲಾಬಿಯನ್ನು ಬೆಳೆಯಲಾಗಿದೆ. ಈ ಬಣ್ಣಗಳಲ್ಲದೇ ನಿಸರ್ಗದ ಇತರೇ ವಿನ್ಯಾಸಗಳನ್ನು ಹೂಗಳಲ್ಲಿ ಮೂಡಿಸುವ ಪ್ರಯತ್ನಗಳು ನಡೆದಿವೆ. ನಮಗೆಲ್ಲ ತಿಳಿದಿರುವಂತೆ ನೀಲಿ ಹತ್ತಿಯನ್ನು ಧಾರವಾಡದಲ್ಲಿ ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದೆ. ಇತರೆ ವರ್ಣದ ಹತ್ತಿಯನ್ನು ಬೆಳೆಯಲು ಸಾಧ್ಯವಾದರೆ ಬೇರೆ ಬಣ್ಣಗಳನ್ನು ಹತ್ತಿಗೆ ಸೇರಿಸಿ ಬಣ್ಣ ಬಣ್ಣದ ಬಟ್ಟೆಗಳನ್ನು ತಯಾರಿಸುವ ಕೈಗಾರಿಕೆಗಳಿಗೆ ಹೊಡೆತಬೀಳಬಹುದು. ಈ ಕೈಗಾರಿಕೆಯಲ್ಲಿ ಬಳೆಸುತ್ತಿರುವ ಸೀಸ ಲೋಹ ಮೂಲದ ವರ್ಣದ್ರವ್ಯಗಳು ವಿಷಕಾರಕವೆನಿಸಿದ್ದು ಕಾರ್ಮಿಕರ ಮತ್ತು ಕೈಗಾರಿಕಾ ವರ್ಜೋಜಲ ಹರಿವ ನೀರಿಗೆ ಸೀಸವನ್ನು ಸೇರಿಸಿ ನೀರಿನಲ್ಲಿರುವ ಪ್ರಾಣಿಗಳಿಗೆ ಹಾಗೂ ಅದನ್ನು ಸೇವಿಸುವ ಪ್ರಾಣಿಗಳಿಗೆ ಅಪಾಯಕಾರಿಯೆಂದು ಸಾಬೀತಾಗಿದೆ. ಇಂಥಹ ಹೊಸ ಸಂಶೋಧನೆಗಳು ಕೈಗಾರಿಕಾ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡುವುದಲ್ಲದೇ ಪರಿಸರಮಾಲಿನ್ಯ ತಡೆಯುವಲ್ಲಿ ಮಹತ್ವದ ಪಾತ್ರವಹಿಸುತ್ತವೆ.

ಈಗಾಗಲೇ ನಿಸರ್ಗಲ್ಲಿರುವ ಸುಗಂಧ ಪುಪ್ಪಗಳು, ಹಣ್ಣುಗಳು, ತರಕಾರಿಗಳು ನಿಸರ್ಗದ ಮಿಲಿಯಾಂತರ ವರ್ಷಗಳ ವಿಕಾಸದಿಂದ ಸೃಷ್ಟಿಯಾಗಿವೆ. ನಿಸರ್ಗದ ಮೂಲವನ್ನೂ ಅರಿತು ಅದರ ತಂತ್ರವನ್ನು ಮನುಷ್ಯನ ಜೈವಿಕ ತಂತ್ರಜ್ಞಾನದಲ್ಲಿ ಬಳಸಿ ಆಕ್ರಿಯೆಗೆ ಬೇಕಾಗುವ ಮಿಲಿಯಾಂತರ ವರ್ಷಗಳ ಬದಲು ಒಂದೆರೆಡು ವರ್ಷಗಳಲ್ಲಿಯೇ ಅದನ್ನು ಸಾಧಿಸಬಹುದು. ಇದರಿಂದಾಗಿ ವಿಕಾಸವನ್ನು ವೇಗಗೊಳಿಸುವ ಪ್ರಯತ್ನದಲ್ಲಿ ಜೈವಿಕ ತಂತ್ರಜ್ಞಾನ ಪ್ರಮುಖ ಪಾತ್ರವನ್ನೂ ವಹಿಸುತ್ತದೆ.
*****

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...