ಶಂತನು ಮರಳಿ ಬಂದಾಗ

ನಾನು ಇನ್ನೊಮ್ಮೆ ಮರಳಿ ಬರುವಾಗ
ಬದುಕಿನ ಯಾವದಾದರೂ ಒಂದು ತಿರುವಿನಲ್ಲಿ
ಸತ್ಯವತಿಯಾಗಿ ಸತಿಯಾಗಿ
ನೀನು ಖಂಡಿತ ನನಗೆ ಸಿಕ್ಕುತ್ತಿ
ಹಳೆ ಪರಿಚಯ ಉಕ್ಕಿ ಬಂದು
ಮನದಲ್ಲಿ ಬಿಕ್ಕುತ್ತಿ
ಆಗ ನಿನ್ನ ವದನತುಂಬ
ವಿರಹದ ನೋವಿನ ಗೆರೆಗಳನ್ನು
ಬಿಸಿಯುಸಿರಿನಲ್ಲಿ
ಪಾಪಪ್ರಜ್ಞೆಯ ಬರೆಗಳನ್ನು
ನೋಡುವ ಇಚ್ಛೆ ನನಗಿರದು
ಅವೆಲ್ಲ ಹಿಂದೆ ನಡೆದ ಅಪರಾಧಗಳು
ಪ್ರೀತಿ-ನೀತಿಯಿರದ
ದಾಹ-ಮೋಹದ ಮಿಲನದಿಂದಾದ
ಪ್ರಮಾದಗಳು.
ಅವುಗಳಲ್ಲಿ ನಂಬಿಕೆ ನಿನಗೂ ಇರದು.
ಬಯಸಲಿಲ್ಲವೆ ನೀನು ರಾಣಿಯ ಪಟ್ಟ
ಹೊರಿಸಲಿಲ್ಲವೆ ಪರಿಪರಿಯ ಆಣೆಗಳ ಬೆಟ್ಟ
‘ಬೇಡುವುಡೆ ನೀವೆನ್ನ ಅಯ್ಯನಂ ಬೇಡಿ’ರೆಂದು
ನಾಚಿ ನನಗೆ ಹುಚ್ಚು ಹಿಡಿಸಲಿಲ್ಲವೆ,
ಆಗಲೆ ತಿಳಿಯಬೇಕಿತ್ತು
ನಿನ್ನಂತರಂಗದ ಹೋರೆಯನು
ಕಾಮ-ಪ್ರೇಮದ ಮೇರೆಯನು
ಗಂಡು ಎಂದೆಂದೂ ಹೆಣ್ಣಿಗೆ ಸೋತಿದ್ದಾನೆ
ಅಂತ-ದುರಂತಕ್ಕೆ ಬಲಿಯಾಗಿದ್ದಾನೆ
ಅದಕೆಂದೆ ನುಡಿವೆ
ಸಿಕ್ಕಿದರೆ ನೀನು ‘ಹಲೋ’ ಎಂದು ತೆರಳು
ತಡೆಯದಿರು, ನುಡಿಯದಿರು
ಮತ್ತೊಮ್ಮೆ ಕನ್ನೆಯಾಗಿ
ನನ್ನೆದುರು ಸುಳಿಯದಿರು
ನಾನು ಮತ್ತೊಮ್ಮೆ ಮಂಕಾಗಿ
ಮುಂದಿನ ಭಾರತಕ್ಕೆ ಕಾರಣವಾಗಲಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲಿ ಕಾರ್ಮುಗಿಲಿರುವುದೋ
Next post ಸುಮ್ಮನೆಂದರದು ಸಾವಯವವಾದೀತೇ ?

ಸಣ್ಣ ಕತೆ

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…