ಶಂತನು ಮರಳಿ ಬಂದಾಗ

ನಾನು ಇನ್ನೊಮ್ಮೆ ಮರಳಿ ಬರುವಾಗ
ಬದುಕಿನ ಯಾವದಾದರೂ ಒಂದು ತಿರುವಿನಲ್ಲಿ
ಸತ್ಯವತಿಯಾಗಿ ಸತಿಯಾಗಿ
ನೀನು ಖಂಡಿತ ನನಗೆ ಸಿಕ್ಕುತ್ತಿ
ಹಳೆ ಪರಿಚಯ ಉಕ್ಕಿ ಬಂದು
ಮನದಲ್ಲಿ ಬಿಕ್ಕುತ್ತಿ
ಆಗ ನಿನ್ನ ವದನತುಂಬ
ವಿರಹದ ನೋವಿನ ಗೆರೆಗಳನ್ನು
ಬಿಸಿಯುಸಿರಿನಲ್ಲಿ
ಪಾಪಪ್ರಜ್ಞೆಯ ಬರೆಗಳನ್ನು
ನೋಡುವ ಇಚ್ಛೆ ನನಗಿರದು
ಅವೆಲ್ಲ ಹಿಂದೆ ನಡೆದ ಅಪರಾಧಗಳು
ಪ್ರೀತಿ-ನೀತಿಯಿರದ
ದಾಹ-ಮೋಹದ ಮಿಲನದಿಂದಾದ
ಪ್ರಮಾದಗಳು.
ಅವುಗಳಲ್ಲಿ ನಂಬಿಕೆ ನಿನಗೂ ಇರದು.
ಬಯಸಲಿಲ್ಲವೆ ನೀನು ರಾಣಿಯ ಪಟ್ಟ
ಹೊರಿಸಲಿಲ್ಲವೆ ಪರಿಪರಿಯ ಆಣೆಗಳ ಬೆಟ್ಟ
‘ಬೇಡುವುಡೆ ನೀವೆನ್ನ ಅಯ್ಯನಂ ಬೇಡಿ’ರೆಂದು
ನಾಚಿ ನನಗೆ ಹುಚ್ಚು ಹಿಡಿಸಲಿಲ್ಲವೆ,
ಆಗಲೆ ತಿಳಿಯಬೇಕಿತ್ತು
ನಿನ್ನಂತರಂಗದ ಹೋರೆಯನು
ಕಾಮ-ಪ್ರೇಮದ ಮೇರೆಯನು
ಗಂಡು ಎಂದೆಂದೂ ಹೆಣ್ಣಿಗೆ ಸೋತಿದ್ದಾನೆ
ಅಂತ-ದುರಂತಕ್ಕೆ ಬಲಿಯಾಗಿದ್ದಾನೆ
ಅದಕೆಂದೆ ನುಡಿವೆ
ಸಿಕ್ಕಿದರೆ ನೀನು ‘ಹಲೋ’ ಎಂದು ತೆರಳು
ತಡೆಯದಿರು, ನುಡಿಯದಿರು
ಮತ್ತೊಮ್ಮೆ ಕನ್ನೆಯಾಗಿ
ನನ್ನೆದುರು ಸುಳಿಯದಿರು
ನಾನು ಮತ್ತೊಮ್ಮೆ ಮಂಕಾಗಿ
ಮುಂದಿನ ಭಾರತಕ್ಕೆ ಕಾರಣವಾಗಲಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲಿ ಕಾರ್ಮುಗಿಲಿರುವುದೋ
Next post ಸುಮ್ಮನೆಂದರದು ಸಾವಯವವಾದೀತೇ ?

ಸಣ್ಣ ಕತೆ

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ತಿಮ್ಮರಯಪ್ಪನ ಕಥೆ

    ರಂಗಣ್ಣ ಎರಡು ತಿಂಗಳು ಕಾಲ ರಜ ತೆಗೆದು ಕೊಂಡು ಬೆಂಗಳೂರಿಗೆ ಬಂದು ವಾಸಮಾಡುತ್ತಿದ್ದನು. ಶಿವಮೊಗ್ಗದಲ್ಲಿ ಪಿತ್ತವೇರಿಸುವ ತುಂಗಾಪಾನವನ್ನು ನಿತ್ಯವೂ ಮಾಡಿ, ಕಿವಿ ಮೂಗು ಬಾಯಿಗಳಿಗೆಲ್ಲ ಮುಸುರುವ ಸೊಳ್ಳೆಗಳ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…