Home / ಕವನ / ಕವಿತೆ / ನೀನೆ ಕವಿತೆಯ ಉಸಿರಾಗು

ನೀನೆ ಕವಿತೆಯ ಉಸಿರಾಗು

ನನ್ನ ಕವಿತೆಗಳ ಕದ್ದು ಓದುವುದು
ಅದರ ವಿಷಯವನೆತ್ತಿ ತೂಗುವುದು
ನನ್ನವಳ ಚಟ…
‘ಓದಿದೆನು ನಿನ್ನ ಗೀತೆಗಳ ನಲ್ಲ’
ಎಂದು ಮೋಹಕವಾಗಿ
ಹಿಂಡುವಳು ನನ್ನ ಗಲ್ಲ
ಕನಸಿನಲಿ ಮೆಲ್ಲನೆ ಬಂದು ಮುದ್ದು ಮಾತಿನ
ಭಾವರಸದೊಳಗೆ ಮಿಂದು
ಬೆರೆಸಿ ನಿನ್ನನು, ಮೈ ಮರೆಸಿ
ನನ್ನ ದೂರಿದ ರೂಪಸಿ
ಯಾರೆಂದು ನನಗೆ ಗೊತ್ತು
ನೀನು ಬರೆವುದೆ ಅವಳ ಸುತ್ತು ಮುತ್ತು
ನನ್ನ ಕಣ್ಣಲಿ ನೋಟ
ಮೈಯ ಬಳುಕು, ಮಾಟ
ನಿನಗೆ ಕಾಣುವುದೆ ಇಲ್ಲ
ನನ್ನ ಒನಪು ಒಯ್ಯಾರ
ನಿನ್ನ ಮೆಚ್ಚನು ಬಯಸಿ
ಮಾಡಿದ ಸಿಂಗಾರ
ನಿನ್ನ ಕವಿತೆಗೆ ಸ್ಫೂರ್ತಿಯಾಗುವುದಿಲ್ಲ.
ನಿನಗವಳು ರಾಗಿಣಿ
ಮಧು ಮಾಲಿನಿ ಚಕೋರಿ
ಮೀಂಟಿದರೆ ಸಾಕು ಹೊರಡುತ್ತೆ ಆಲಾಪ
ಸ್ವರಸಂಗಮದ ಮೌನದಲಿ
ಬಿಚ್ಚಿಕೊಳ್ಳುತ್ತೆ ಅನಂತ ಸಲ್ಲಾಪ…
ನಾನು ಹೇಳುತ್ತೇನೆ: ಕರುಬದಿರು ನಲ್ಲೆ
ಕವಿತೆಯಲಿ ಬರುವವಳು ನೀನು
ಅವಳಲಿ ನಿನ್ನನಿಟ್ಟು ನಿನ್ನನು ಅವಳಲಿಟ್ಟು
ನೋಡುವೆನು, ಬರೆಯುವೆನು
ನನ್ನ ಒಲವುಗಳ ಬಗೆಯನರಿಯದೆ
ಕನಸಿನವಳಾರೆಂದು ತಿಳಿಯುವುದು ಹೇಗೆ
ಅದಕೆಂದು ನೀನೆ ನನ್ನ ಕವಿತೆಯ
ಕಲ್ಪನೆಯಾಗು, ಉಸಿರಾಗು
ಹಣತೆಯಲಿ ಉರಿವ ದೀಪದ ಹಾಗೆ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...