Home / ಕವನ / ಕವಿತೆ / ಅಂತರ

ಅಂತರ

ದಿನವಿಡೀ
ಮೈಮನಗಳನ್ನು ದುಡಿಸಿ
ಗೋಲಾಕಾರದ ಶೂನ್ಯದೊಂದಿಗೆ
ಹೊರಲಾಗದ ಬೇಗುದಿಯನ್ನು
ಹೊರುತ್ತ
ಮನೆ ಮುಟ್ಟುವಾಗ
ಮನ ಮುಟ್ಟುವ ನಿನ್ನ
ಸ್ವಾಗತದ ಮುಸಿ ನಗೆಯಲಿ
ಪ್ರೇಯಸಿಯ ಕಾತುರವನ್ನು ಕಂಡು
ರಿಕ್ತ ಕರವನ್ನು ನಿನ್ನ ನಡುವಿನ ಸುತ್ತ ಬಳಸಿ
ಹತ್ತಿರಕ್ಕೆ ಎಳೆಯುತ್ತ
ಸೋಫಾಗೆ ಒರಗಿ ಕಾಲು ಚಾಚಿ
ನಿನ್ನ ಸುಂದರ ನಯವಾದ
ಘನ ಹೆರಳನ್ನು ಬಿಡಿಸಿ ಹರಡಿ
ಅದರ ಮೇಲೆ ಕದಪನಿರಿಸಿ
ದುಮ್ಮಾನವನ್ನು ಹೊರಹಾಕುವ
ನಿನ್ನ ನಾಜೂಕು ಬೆರಳುಗಳಲ್ಲಿ
ನನ್ನ ತತ್ವರ ಬೆರಳುಗಳು ಸೇರಿಕೊಂಡು
ತುಸು ಹೊತ್ತು ಕ್ರೀಡಿಸುವಾಗ
‘ಇಂದಿನ ಸುದ್ದಿಯೇನೆಂದು’
ನೀನು ಕೇಳುತ್ತಿ, ನಾನು
ದಾದರಿನವರೆಗೂ ನನ್ನ ಜೊತೆ
ಬಸ್ಸಿನಲ್ಲಿ ಕುಳಿತ
ಸುಂದರ ನೀರೆಯ
ತುಂಟ ವಿವರಗಳ ಜಾಲದಲ್ಲಿ ಮರೆತು
ಆಟದಲ್ಲಿ ಮಗ್ನ ಕರಗಳನ್ನು
ಎದೆಗೊತ್ತಿ
ಮನಸ್ಸನ್ನು ಹಗುರವಾಗಿಸುವ
ಉಸಿರನ್ನು ಬಿಡುತ್ತ
ಕಣ್ಣು ತೆರೆವಾಗ
ಎದುರಿನ ಕಿಟಕಿಯ ಜಾಲಿಯಿಂದ
ದೂರಕ್ಕೆ ಹರಡಿರುವ ಆಕಾಶ
ಕಾಣಿಸುತ್ತದೆ.
ಆಗ ಒಮ್ಮೆಲೆ ನೆಲ ಮುಗಿಲುಗಳ
ದಟ್ಟ ಅಂತರದ ಅರಿವಾಗಿ
ಮನಸ್ಸು ಒಳಗೆಳೆದುಕೊಂಡು
ಅಂತರವನ್ನು ಅಳೆಯುವ
ಸೀಮಾ ರೇಖೆಯನ್ನು
ಹುಡುಕ ತೊಡಗುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...