ಬಯಕೆಯುತ್ಸವ

ಬಂತು ಶ್ರಾವಣ
ಎಂತು ಬದುಕುವಳೊ
ನಲ್ಲೆ ಜೀವ ಉಳಿಸಿ
ಎಂದು ಹಪಹಪಿಸಿ
ಮೈಗೆ ಮನಸ್ಸಿಗೆ ಯಾತನೆಯ ಬರಿಸಿ
ಬರಿದೆ ಕೊರಗದಿರು, ಸೊರಗದಿರು ನಲ್ಲ
ತುಂತುರು ಮಳೆಯ ತುಷಾರಕ್ಕೆ
ತಂಗಾಳಿಯ ಅಲೆ ಬಂದು ಸಿಲುಕಿದಾಗ
ನನ್ನ ಹೃದಯದ ಎಳೆ ಎಳೆದಂತಾಗಿ
ಯಕ್ಷ, ನಿನ್ನ ನೆನಪಿನ ಸುಳಿ ಏಳುವುದು
ಮೊದಲ ದಿವಸಗಳ, ರಾತ್ರಿಗಳ, ಕ್ಷಣಗಳ
ಅನುಭವದ ಸ್ವರ್ಗಸುಖ
ಎಂತು ಬರುವುದೊ ಮತ್ತೊಮ್ಮೆ
ಎಂದು ನನ್ನ ಜೀವವೂ ತುಡಿಯುವುದು
ಮಿಡಿಯುವುದು….
ಹಿಂದಿನಂತಲ್ಲ.
ಇಂದು ಬರಗಾಲವಿಲ್ಲ
ಈ ಸಲ ನಭವೇ ಕಳಚಿ ಬಿದ್ದಿದೆ
ಮೇಘ ಮಿತ್ರ ನಮ್ಮ ವಿರಹ ವಾರ್ತೆಯನು
ಹೊತ್ತು
ದುಃಖ ಭಾರವ ತಾಳಲಾರದೆ
ಬಾಂದಳದಿಂದ ಬಿದ್ದು
ಎಲ್ಲಡೆಯಲ್ಲು ನೆರೆಯನು ಬರಿಸಿದ್ದಾನೆ
ಹಸು-ಹಟ್ಟಿ ಬೆಳೆ-ಮಳೆ ಜನ ವಸತಿ-
ಗಳನೆಲ್ಲ ಹೊಚ್ಚಳಿಸಿ
ನಮ್ಮ ಮಂತ್ರಿಗಳನ್ನು ಮತ್ತೊಮ್ಮೆ
ವಿಮಾನ ವೀಕ್ಷಣಕೆ ಭರವಸೆಗಳ ಭಾಷಣಕೆ
ತೊಡಗಿಸಿದ್ದಾನೆ.
ಆದರೂ
ಪ್ರೇಮಿಗಳಿಬ್ಬರನು
ಜಾತಿ ನೀತಿಯ ಸಂಪತ್ತಿನ ಸವಾಲು ಹಾಕಿ
ಅಗಲಿಪುದೆ ಸುಖ ಈಜಗಕೆ
ಮೊನ್ನೆ…. ಕೇಳಿದೆಯಲ್ಲ
ಪ್ರಖರ ಪ್ರೇಮಿಗಳೀರ್ವರು
ಒಂದೆ ಉರುಳಿಗೆ ತಮ್ಮ ಕೊರಳನ್ನು ಬಿಗಿದು
ಅಪ್ಪಿಕೊಂಡೇ ಇಹದ ಜಂಜಡದಿಂದ
ರಿಕ್ತರಾದುದ, ಮುಕ್ತರಾದುದ… ಕೇಳಿದೆಯಲ್ಲ
ದೂರವಾಣಿಯಲಿ ನನ್ನ ಮನದಳಲುಗಳ
ಕೂರವಾಗಿಹ ಗತಿವಿಧಿಯ
ದೂರಿ ಹೇಳುವ ಮನಸಾದರೂ
ದೂರವಾಣಿಯ ತಾರೊತ್ತಿ
ದೂರುಗಳ ಸೆರೆಹಿಡಿದ
ಚೋರರ ಭಯವಾಗಿ
ನಿನ್ನ ರಾಜಪದವಿಯನೆ ಕಸಿದು
ದುರ್ಗತಿಗೆಸೆದು
ಪದಚ್ಯುತಿಗೊಳಿಸಿ ಅಳಿಸಿ
ನಿನ್ನವರನ್ನೆ ನಿನ್ನ ವಿರುದ್ಧ ಮಸೆದು
ಸತ್ತೆಯನೆ ಬದಲಿಸುವರೆಂಬ
ಅಳಕು ಬಂತು ಸುತ್ತಿ…
ಅಂಚೆ ವಿಧೇಯಕ
ಕಾಯಿದೆಯಾಗುವ ಮುನ್ನ
ನನ್ನ ದುಗುಡದ ವಿಸ್ತಾರವನ್ನ
ಎಕ್ಕಣಿಸಿ
ಆಷಾಡದ ಪ್ರಥಮ ದಿವಸಗಳ
ಸವಿನೆನಪು ರಸನಿಮಿಷಗಳ
ಲೆಕ್ಕಣಿಸಿ
ಕಳಿಸುವೆನು ನಿನಗೊಂದು
ಪ್ರಣಯ ಪತ್ರವ ಚಿನ್ನ
ಅದಕೆಂದೆ ಮಿಲನದ
ಬಯಕೆಯುತ್ಸವದಿ ಕೊಡೆ ಬಿಡಿಸಿ
ಬದುಕಿರುವೆ ಶ್ರಾವಣದಲು
ಜೀವ ಉಳಿಸಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಮ್ಮನ ತೊರೆದು ನಾವೆಲ್ಲ
Next post ಸ್ವಗೃಹಸ್ಥನಾಗದೆ ಸಾವಯವವುಂಟೇ ?

ಸಣ್ಣ ಕತೆ

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

cheap jordans|wholesale air max|wholesale jordans|wholesale jewelry|wholesale jerseys