ಬಯಕೆಯುತ್ಸವ

ಬಂತು ಶ್ರಾವಣ
ಎಂತು ಬದುಕುವಳೊ
ನಲ್ಲೆ ಜೀವ ಉಳಿಸಿ
ಎಂದು ಹಪಹಪಿಸಿ
ಮೈಗೆ ಮನಸ್ಸಿಗೆ ಯಾತನೆಯ ಬರಿಸಿ
ಬರಿದೆ ಕೊರಗದಿರು, ಸೊರಗದಿರು ನಲ್ಲ
ತುಂತುರು ಮಳೆಯ ತುಷಾರಕ್ಕೆ
ತಂಗಾಳಿಯ ಅಲೆ ಬಂದು ಸಿಲುಕಿದಾಗ
ನನ್ನ ಹೃದಯದ ಎಳೆ ಎಳೆದಂತಾಗಿ
ಯಕ್ಷ, ನಿನ್ನ ನೆನಪಿನ ಸುಳಿ ಏಳುವುದು
ಮೊದಲ ದಿವಸಗಳ, ರಾತ್ರಿಗಳ, ಕ್ಷಣಗಳ
ಅನುಭವದ ಸ್ವರ್ಗಸುಖ
ಎಂತು ಬರುವುದೊ ಮತ್ತೊಮ್ಮೆ
ಎಂದು ನನ್ನ ಜೀವವೂ ತುಡಿಯುವುದು
ಮಿಡಿಯುವುದು….
ಹಿಂದಿನಂತಲ್ಲ.
ಇಂದು ಬರಗಾಲವಿಲ್ಲ
ಈ ಸಲ ನಭವೇ ಕಳಚಿ ಬಿದ್ದಿದೆ
ಮೇಘ ಮಿತ್ರ ನಮ್ಮ ವಿರಹ ವಾರ್ತೆಯನು
ಹೊತ್ತು
ದುಃಖ ಭಾರವ ತಾಳಲಾರದೆ
ಬಾಂದಳದಿಂದ ಬಿದ್ದು
ಎಲ್ಲಡೆಯಲ್ಲು ನೆರೆಯನು ಬರಿಸಿದ್ದಾನೆ
ಹಸು-ಹಟ್ಟಿ ಬೆಳೆ-ಮಳೆ ಜನ ವಸತಿ-
ಗಳನೆಲ್ಲ ಹೊಚ್ಚಳಿಸಿ
ನಮ್ಮ ಮಂತ್ರಿಗಳನ್ನು ಮತ್ತೊಮ್ಮೆ
ವಿಮಾನ ವೀಕ್ಷಣಕೆ ಭರವಸೆಗಳ ಭಾಷಣಕೆ
ತೊಡಗಿಸಿದ್ದಾನೆ.
ಆದರೂ
ಪ್ರೇಮಿಗಳಿಬ್ಬರನು
ಜಾತಿ ನೀತಿಯ ಸಂಪತ್ತಿನ ಸವಾಲು ಹಾಕಿ
ಅಗಲಿಪುದೆ ಸುಖ ಈಜಗಕೆ
ಮೊನ್ನೆ…. ಕೇಳಿದೆಯಲ್ಲ
ಪ್ರಖರ ಪ್ರೇಮಿಗಳೀರ್ವರು
ಒಂದೆ ಉರುಳಿಗೆ ತಮ್ಮ ಕೊರಳನ್ನು ಬಿಗಿದು
ಅಪ್ಪಿಕೊಂಡೇ ಇಹದ ಜಂಜಡದಿಂದ
ರಿಕ್ತರಾದುದ, ಮುಕ್ತರಾದುದ… ಕೇಳಿದೆಯಲ್ಲ
ದೂರವಾಣಿಯಲಿ ನನ್ನ ಮನದಳಲುಗಳ
ಕೂರವಾಗಿಹ ಗತಿವಿಧಿಯ
ದೂರಿ ಹೇಳುವ ಮನಸಾದರೂ
ದೂರವಾಣಿಯ ತಾರೊತ್ತಿ
ದೂರುಗಳ ಸೆರೆಹಿಡಿದ
ಚೋರರ ಭಯವಾಗಿ
ನಿನ್ನ ರಾಜಪದವಿಯನೆ ಕಸಿದು
ದುರ್ಗತಿಗೆಸೆದು
ಪದಚ್ಯುತಿಗೊಳಿಸಿ ಅಳಿಸಿ
ನಿನ್ನವರನ್ನೆ ನಿನ್ನ ವಿರುದ್ಧ ಮಸೆದು
ಸತ್ತೆಯನೆ ಬದಲಿಸುವರೆಂಬ
ಅಳಕು ಬಂತು ಸುತ್ತಿ…
ಅಂಚೆ ವಿಧೇಯಕ
ಕಾಯಿದೆಯಾಗುವ ಮುನ್ನ
ನನ್ನ ದುಗುಡದ ವಿಸ್ತಾರವನ್ನ
ಎಕ್ಕಣಿಸಿ
ಆಷಾಡದ ಪ್ರಥಮ ದಿವಸಗಳ
ಸವಿನೆನಪು ರಸನಿಮಿಷಗಳ
ಲೆಕ್ಕಣಿಸಿ
ಕಳಿಸುವೆನು ನಿನಗೊಂದು
ಪ್ರಣಯ ಪತ್ರವ ಚಿನ್ನ
ಅದಕೆಂದೆ ಮಿಲನದ
ಬಯಕೆಯುತ್ಸವದಿ ಕೊಡೆ ಬಿಡಿಸಿ
ಬದುಕಿರುವೆ ಶ್ರಾವಣದಲು
ಜೀವ ಉಳಿಸಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಮ್ಮನ ತೊರೆದು ನಾವೆಲ್ಲ
Next post ಸ್ವಗೃಹಸ್ಥನಾಗದೆ ಸಾವಯವವುಂಟೇ ?

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…